Webdunia - Bharat's app for daily news and videos

Install App

ಕಾವೇರಿ ನೀರು ಬಿಡಿಸಿ: ಪ್ರಧಾನಿಗೆ ಸ್ಟಾಲಿನ್‌ ಮನವಿ

Webdunia
ಭಾನುವಾರ, 6 ಆಗಸ್ಟ್ 2023 (20:20 IST)
ಕರ್ನಾಟಕ ಬಾಕಿ ಉಳಿಸಿಕೊಂಡಿರುವ 28.8 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಸೂಚಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಪತ್ರ ಬರೆದಿರುವ ಅವರು ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಬಿಳಿಗುಂಡ್ಲು ಬಳಿ ಉಭಯ ರಾಜ್ಯಗಳು ಹಂಚಿಕೊಳ್ಳಬೇಕಾದ ನೀರಿನ ಪ್ರಮಾಣವನ್ನು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ದುರಾದೃಷ್ಟವಶಾತ್‌ ಈ ತೀರ್ಪನ್ನು ಕರ್ನಾಟಕ ಸರ್ಕಾರ ಮಾನ್ಯ ಮಾಡುತ್ತಿಲ್ಲ. 2023-24ನೇ ಸಾಲಿನಲ್ಲಿ ಕರ್ನಾಟಕ 11.6 TMC ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಕರ್ನಾಟಕ ಒಟ್ಟು 40.4 TMC ನೀರು ಬಿಡುಗಡೆ ಮಾಡಬೇಕಿತ್ತು. ಹಾಗಾಗಿ ಉಳಿದ 28.8 TMC ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಮೋದಿ ಅವರು ಸೂಚಿಸಬೇಕು. ಕರ್ನಾಟಕ ತನ್ನ 4 ಅಣೆಕಟ್ಟುಗಳಲ್ಲಿ 91 TMC ನೀರನ್ನು ಹೊಂದಿದೆ. ಆದರೆ ಮೆಟ್ಟೂರು ಅಣೆಕಟ್ಟೆಯಲ್ಲಿ ಕೇವಲ 26.6 ಟಿಎಂಸಿ ನೀರು ಇದೆ. ಕುಡಿಯುವ ನೀರು ಹಾಗೂ ಇನ್ನಿತರ ಅವಶ್ಯಕತೆಗಳಿಗೆ ಹೋಲಿಸಿದರೆ ಇಲ್ಲಿ ಸಾಕಾಗುವಷ್ಟಿಲ್ಲ ಎಂದಿದ್ದಾರೆ. ಈಗಾಗಲೇ ಈ ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ಅವರಿಗೆ ನಾವು ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರ ಈಗಾಗಲೇ ಅಕ್ಕಿಯ ರಫ್ತು ನಿಷೇಧ ಮಾಡಿದೆ. ಅದೇ ರೀತಿ ಕಾವೇರಿ ಸೀಮೆಯಲ್ಲಿ ಬೆಳೆಯುವ ಭತ್ತವನ್ನು ರಕ್ಷಣೆ ಮಾಡಲು ನೀರು ಬಿಡುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments