Publish Date: Tue, 05 Dec 2023 (19:46 IST)
Updated Date: Tue, 05 Dec 2023 (19:10 IST)
ಇಂದು ಬೆಳಗಾವಿ ಅಧಿವೇಶನಲ್ಲಿ ಇಂದು ಮಾಜಿ ಸಿಎಂ H.D.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.. ಸದ್ಯ ತೆಲಂಗಾಣದಲ್ಲಿ ಇರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸದನಕ್ಕೆ ಹಾಜರಾಗಲಿದ್ದಾರೆ.
ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ HDK ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದು, ಇಂದು ಸದನದಲ್ಲಿ ವಾಗ್ದಾಳಿ ನಡೆಸಲು ಸಜ್ಜಾಗಿದ್ದಾರೆ.. ಇತ್ತ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸಹ ತಂತ್ರ ರೂಪಿಸಿದೆ. ಹಾಗಾಗಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಕಾವೇರುವ ಸಾಧ್ಯತೆಗಳಿವೆ