Webdunia - Bharat's app for daily news and videos

Install App

ಸನ್ನಡತೆ ಆಧಾರದಲ್ಲಿ ಜೈಲಿನಿಂದ ಕೈದಿಗಳ ರಿಲೀಸ್

Webdunia
ಶುಕ್ರವಾರ, 5 ಅಕ್ಟೋಬರ್ 2018 (17:47 IST)
‌ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ರಾಜ್ಯಾದ್ಯಂತ 45 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ‌ ಮಾಡಲಾಯಿತು. ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಧೀಶ ಜಗದೀಶ, ಜೈಲರ್ ಕೃಷ್ಣಕುಮಾರ ಸಮ್ಮಖದಲ್ಲಿ ಕೈದಿಗಳಾದ ವೆಂಕಟೇಶ್ ಆಂದೋಲಾ, ನರಸಪ್ಪ ಯಲಮೂರ, ಖಲಿಂದರ್ ಮಸ್ಕಿಂರನ್ನ ಬಿಡುಗಡೆ ಮಾಡಲಾಯಿತು.

2012ರಲ್ಲಿ ಸ್ವಂತ ಅಣ್ಣನ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ್ ಜೈಲು ಸೇರಿದ್ದರೆ, 2012ರಲ್ಲಿ ನರಸಪ್ಪ ಮಗನ ಕೊಲೆ ಮಾಡಿ ಜೈಲು ಸೇರಿದ್ದ. ಈ ಇಬ್ಬರು ಕೈದಿಗಳಿಗೆ ಹತ್ತು ವರ್ಷ ಶಿಕ್ಷೆಯಾಗಿದ್ದು, ಈಗಾಗಲೇ ತಲಾ 8 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ.‌ ಮತ್ತೋರ್ವ ಕೈದಿ ಖಲಿಂದರ್ ಎರಡು ವರ್ಷಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ಸನ್ನಡತೆ ಆಧಾರದ ಮೇಲೆ ಈಗ ಈ ಮೂವರು ಬಿಡುಗಡೆಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments