Webdunia - Bharat's app for daily news and videos

Install App

ಬೆಳೆಗಾರರಿಗೆ ಪರಿಹಾರ ಧನ : ಮೇ 26 ರೊಳಗೆ ಅರ್ಜಿ ಸಲ್ಲಿಸಿ

Webdunia
ಗುರುವಾರ, 14 ಮೇ 2020 (16:44 IST)
ಕೋವಿಡ್-19 ನಿಂದಾಗಿ ಲಾಕ್ ಡೌನ್ ಮಾಡಿರುವ  ಹಿನ್ನೆಲೆಯಲ್ಲಿ ಬೆಳೆಗಾರರಿಗೆ ಸರಕಾರ ಸಹಾಯಧನ ವಿತರಣೆ ಮಾಡುತ್ತಿದ್ದು, ಬೆಳೆಗಾರರಿಂದ ಅರ್ಜಿ ಸಲ್ಲಿಸಲು ಸೂಚಿಸಿದೆ.

ಲಾಕ್ ಡೌನ್ ನಿಂದ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ ಹಾನಿಯಾಗಿರುತ್ತದೆ.

ಈ ಹಿನ್ನಲೆಯಲ್ಲಿ 2020-21 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರಾಮನಗರ ಜಿಲ್ಲೆಯ ಹೂವು ಬೆಳೆಗಾರರಿಗೆ ಪರಿಹಾರಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.

ಹೂವಿನ  ಬೆಳೆಗಾರರಿಗೆ ಪರಿಹಾರಧನ ಕಾರ್ಯಕ್ರಮದಡಿ ಪ್ರತಿ ಫಲಾನುಭವಿಗೆ ಗರಿಷ್ಠ 1 ಹೆಕ್ಟೇರ್ ಪ್ರದೇಶಕ್ಕೆ ರೂ. 25,000 ಮೀರದಂತೆ ಪರಿಹಾರ ಧನ ನೀಡಲಾಗುವುದು.

ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯಲ್ಲಿನ ಪಟ್ಟಿಯಲ್ಲಿ ಹೆಸರಿಲ್ಲದ ಹೂ ಬೆಳಗಾರರು ನಿಗದಿತ ಅರ್ಜಿ ನಮೂನೆ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ ಮತ್ತು ಸ್ವಯಂ ದೃಢೀಕರಣ ಘೋಷಣಾ ಪತ್ರದೊಂದಿಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಗೆ ಮೇ 26 ರೊಳಗಾಗಿ ಅರ್ಜಿ ಸಲ್ಲಿಸುವುದು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments