Select Your Language

Notifications

webdunia
webdunia
webdunia
webdunia

ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ: ಸಚಿವ ರೈ ತಿರುಗೇಟು

ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ: ಸಚಿವ ರೈ ತಿರುಗೇಟು
ಬೆಂಗಳೂರು , ಸೋಮವಾರ, 19 ಜೂನ್ 2017 (13:12 IST)
ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ. ದಕ್ಷಿಣ ಕನ್ನಡದಲ್ಲಿ ಹಿಂಸಾಚಾರ ಘಟನೆಗಳಿಗೆ ಮತೀಯ ಸಂಘಟನೆಗಳೇ ಕಾರಣವಾಗಿವೆ ಎಂದು ಸಚಿವ ರಮಾನಾಥ್ ರೈ ತಿರುಗೇಟು ನೀಡಿದ್ದಾರೆ.
 
ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಇದನ್ನು ಸಹಿಸಬೇಕಾ? ಪೊಲೀಸರಿಗೆ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.
 
ಬಂಟ್ವಾಳ, ಕಲ್ಲಡ್ಕ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಂಜಾನ್ ಸಂದರ್ಭದಲ್ಲಿ ಅಲ್ಪಸಂಖ್ಯಾತ ಯುವಕನನ್ನು ಹತ್ಯೆ ಮಾಡಲಾಯಿತು. ಇದಕ್ಕೆ ಯಾರು ಕಾರಣರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
 
ಕೊಲೆಗಡುಕರಿಗೆ ಆಶ್ರಯ ನೀಡಿದ್ದೇನೆ ಎನ್ನುವ ಆರೋಪಿಗಳನ್ನು ಬಿಜೆಪಿ ಮಾಡುತ್ತಿದೆ. ಒಂದು ವೇಳೆ ಕೊಲೆಗಡುಕರಿಗೆ ಆಶ್ರಯ ನೀಡಿರುವುದು ಸಾಬೀತುಪಡಿಸಿದಲ್ಲಿ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದರು.
 
ನಾನು ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರ ವಿರೋಧದ ಮಧ್ಯೆಯೂ ಆರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದೇನೆ. ನಾನು ಜಾತ್ಯಾತೀತವಾದಿ ಎಂದು ಸಚಿವ ರಮಾನಾಥ್ ರೈ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.  
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ, ಚಲಿಸುತ್ತಿದ್ದ ರೈಲಿನಿಂದ ಬಿಸಾಕಿದ ದುಷ್ಕರ್ಮಿಗಳು