Webdunia - Bharat's app for daily news and videos

Install App

ಟ್ರಾಫಿಕ್ ರಿಯಾಯಿತಿ ದಂಡ ಕಟ್ಟಲು ಸವಾರರಿಂದ ನಿರಾಸಕ್ತಿ

Webdunia
ಬುಧವಾರ, 8 ಮಾರ್ಚ್ 2023 (06:20 IST)
ಬೆಂಗಳೂರು : ಎರಡನೇ ಬಾರಿಯ ರಿಯಾಯಿತಿ ಸಂಚಾರ ದಂಡ ಕಟ್ಟಲು ವಾಹನ ಸವಾರರಿಂದ ನಿರಾಸಕ್ತಿ ವ್ಯಕ್ತವಾಗಿದೆ. ಮೊದಲ ಅವಧಿಯಲ್ಲಿ ತಾ ಮುಂದು ನಾ ಮುಂದು ಅಂತಾ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದರು.
 
ಎರಡನೇ ಅವಧಿಯಲ್ಲಿ ಅಷ್ಟೊಂದು ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಶೇ.50 ಡಿಸ್ಕೌಂಟ್ ಪ್ರಕಟಿಸಿದ ಬೆನ್ನಲ್ಲೇ ಸಾಲಿನಲ್ಲಿ ನಿಂತು ಫೈನ್ ಕಟ್ಟಿ ನಿಟ್ಟುಸಿರು ಬಿಟ್ಟಿದ್ದರು. ಕೇವಲ 9 ದಿನಗಳಲ್ಲಿ 150 ಕೋಟಿ ರೂ. ದಂಡ ಕಟ್ಟಿ 50 ಲಕ್ಷ ಕೇಸ್ಗಳು ಕ್ಲೀಯರ್ ಆಗಿತ್ತು.

ಮತ್ತಷ್ಟು ಸಮಯ ವಿಸ್ತರಣೆ ಮಾಡುವಂತೆ ಸವಾರರಿಂದ ಮನವಿಗಳು ಬಂದಿತ್ತು. ಈ ಬಗ್ಗೆ ರಾಜ್ಯ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ ವೀರಪ್ಪ ಸಭೆ ನಡೆಸಿ ದಂಡದ ಅವಧಿ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. 

ಇದೀಗ 14 ದಿನಗಳ ಎರಡನೇ ಬಾರಿಯ ರಿಯಾಯಿತಿಯಲ್ಲಿ ದಂಡ ಪಾವತಿಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಮಾರ್ಚ್ 4 ರಿಂದ ಈವರೆಗೆ ಕೇವಲ 2.68 ಕೋಟಿ ರೂ. ದಂಡ ಪಾವತಿಯಾಗಿದೆ. ನಾಲ್ಕು ದಿನಗಳಲ್ಲಿ 93 ಸಾವಿರ ಟ್ರಾಫಿಕ್ ಕೇಸ್ಗಳು ವಿಲೇವಾರಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments