Webdunia - Bharat's app for daily news and videos

Install App

ಬೆಳಗಾವಿಯಲ್ಲಿ ನೇಹಾ ಹಿರೇಮಠ್ ಹತ್ಯೆ ನೆನೆದು ಕಾಂಗ್ರೆಸ್ ವಿರುದ್ಧ ಗುಡುಗಿದ ಮೋದಿ

Sampriya
ಭಾನುವಾರ, 28 ಏಪ್ರಿಲ್ 2024 (12:49 IST)
photo Courtesy X
ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆ ಬೆಳಗಾವಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಹಿರೇಮಠ್ ಪ್ರಕರಣದಲ್ಲಿ ಕಾಂಗ್ರೆಸ್ ಅನ್ಯಾಯ ಎಸಗಿದೆ ಎಂದು ಗುಡುಗಿದರು.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿಯಲ್ಲಿ ಆದಿವಾಸಿ ಸಹೋದರಿ ಜೊತೆ ಅನ್ಯಾಯ ಆಗಿದೆ. ಚಿಕ್ಕೋಡಿಯ ಘಟನೆ ನಾಚಿಕೆಪಡುವಂಥಾ ಕೃತ್ಯವಾಗಿದೆ. ಅದಲ್ಲದೆ ಸ್ನೇಹಿತನಿಂದಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯನ್ನು ಹತ್ಯೆಯಾಗಿದ್ದು, ಇವೆಲ್ಲ ಕರ್ನಾಟಕದ ಪ್ರತಿಷ್ಠೆಯನ್ನು ಮಣ್ಣು ಪಾಲಾಗಿಸುವ ಘಟನೆ ಎಂದರು.

ಇನ್ನೂ ಹತ್ಯೆಗೀಡಾದ ಣೇಹಾ ಪ್ರಕರಣದ ಆಕೆ ಪೋಷಕರು ನ್ಯಾಯ ಕೇಳಿದ್ರೆ ಆದರೆ ಕಾಂಗ್ರೆಸ್ ತುಷ್ಟೀಕರಣಕ್ಕೆ ಮುಂದಾಗಿದೆ. ಕಾಂಗ್ರೆಸ್‌ಗೆ ಕಾನೂನು ವಿಚಾರದಲ್ಲಿ ಗಂಭೀರತೆ ಇಲ್ಲ. ಬೆಂಗಳೂರಿನ ರಾಮೇಶ್ವರ ಬಾಂಬ್​ ಬ್ಲಾಸ್ಟ್ ಅನ್ನು ಸಿಲಿಂಡರ್ ಸ್ಪೋಟ ಎಂದು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಕಾಂಗ್ರೆಸ್‌ನವರಿಗೆ ರಾಜ್ಯದಲ್ಲಿ ಕಾನೂನು ಕಾಪಾಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಗುಡುಗಿದರು.

ಶಿವಾಜಿ, ಚೆನ್ನಮ್ಮ ದೇಶಭಕ್ತಿ ಇಂದಿಗೂ ಪ್ರೇರಕವಾಗಿದೆ. ಮೈಸೂರು ರಾಜಮನೆತನವನ್ನ ದೇಶ ಹೆಮ್ಮೆಯಿಂದ ನೋಡುತ್ತದೆ ಯುವರಾಜನ ಹೇಳಿಕೆ ವೋಟ್‌ ಬ್ಯಾಂಕ್ ರಾಜಕಾರಣವಾಗಿದೆ. ನವಾಬರು, ನಿಜಾಮರು, ಸುಲ್ತಾನರ ಅತ್ಯಾಚಾರದ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್‌ಗೆ ಔರಂಜೇಬನ ಅತ್ಯಾಚಾರ ನೆನಪಾಗಲ್ಲ. ವೋಟ್‌ ಬ್ಯಾಂಕ್‌ಗೆ ರಾಜರ ವಿರುದ್ಧ ಮಾತನಾಡ್ತಾರೆ ಎಂದು ಗುಡುಗಿದರು.

ನವಾಬರು, ಸುಲ್ತಾನರ ವಿರುದ್ಧ ಮಾತನಾಡಲ್ಲ. ಕಾಂಗ್ರೆಸ್‌ನದ್ದು ತುಷ್ಟೀಕರಣದ ಮಾನಸಿಕತೆ. ಕಾಂಗ್ರೆಸ್ ಮಾನಸಿಕತೆ ದೇಶದ ಎದುರು ಬಹಿರಂಗವಾಗಿದೆ. ಕಾಂಗ್ರೆಸ್ ಮಾನಸಿಕತೆ ಪ್ರಣಾಳಿಕೆಯಲ್ಲೂ ಕಂಡು ಬಂದಿದೆ ಎಂದು ಕಿಡಿಕಾರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments