Webdunia - Bharat's app for daily news and videos

Install App

ಅಂಗಿ-ಬನಿಯನ್ ತೆಗೆದು ಒಳಗೆ ಪ್ರವೇಶ ಮಾಡಿ ನಾಮಫಲಕಕ್ಕೆ ಬ್ರೇಕ್ ಸಾಧ್ಯತೆ

Webdunia
ಮಂಗಳವಾರ, 20 ಸೆಪ್ಟಂಬರ್ 2022 (16:34 IST)
ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಅದರದ್ದೇ ಆದ ಕಟ್ಟುಪಾಡುಗಳಿರುತ್ತವೆ. ಅವುಗಳಲ್ಲಿ 'ಅಂಗಿ-ಬನಿಯನ್ ತೆಗೆದು ಒಳಗೆ ಪ್ರವೇಶ ಮಾಡಿ' ಎಂಬ ನಿಯಮವೂ ಒಂದು. ರಾಜ್ಯದ ಕೆಲವು ದೇವಸ್ಥಾನಗಳಲ್ಲೂ ಈ ನಿಯಮ ಜಾರಿಯಲ್ಲಿದೆ. ಆದರೆ ಇದೀಗ ಈ ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ದೇವಸ್ಥಾನಗಳಲ್ಲಿ ಅಂಗಿ-ಬನಿಯನ್​ ತೆಗೆದು ಪ್ರವೇಶ ಮಾಡಬೇಕು ಎಂಬ ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಮಂಗಳೂರು ಮೂಲದ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್​ಇಸಿಎಫ್​) ಅರ್ಜಿ ಸಲ್ಲಿಸಿದೆ.
 
ಇತ್ತೀಚೆಗೆ ಎನ್​ಇಸಿಎಫ್​ ಸದಸ್ಯರು ಕೊಲ್ಲೂರು ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಅಲ್ಲಿ ಪುರುಷರು ಅಂಗಿ ಮತ್ತು ಬನಿಯನ್ ತೆಗೆದು ಒಳಗೆ ಪ್ರವೇಶ ಮಾಡಬೇಕು ಎಂಬ ನಿಯಮ ಇರುವುದು ಕಂಡುಬಂದಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ ಹಿಂದೂ ಧರ್ಮಗ್ರಂಥಗಳಲ್ಲಿ ಇಂಥ ನಿಯಮಗಳ ಉಲ್ಲೇಖ ಇರುವುದು ಕಂಡುಬಂದಿಲ್ಲ. ಮಾತ್ರವಲ್ಲ, ಈ ಕುರಿತು ಯಾವುದೇ ಸರ್ಕಾರಿ ಆದೇಶ ಕೂಡ ಇರುವುದಿಲ್ಲ. ಅದಾಗ್ಯೂ ಯಾತ್ರಿಗಳಿಗೆ ಮುಜುಗರ ಆಗುವಂಥ ಈ ನಿಯಮ ವರ್ಷಗಳಿಂದ ಜಾರಿಯಲ್ಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
 
 
 
ಹೀಗೆ ಅಂಗಿ-ಬನಿಯನ್ ತೆಗೆದು ಪ್ರವೇಶಿಸುವವರಲ್ಲಿ ಚರ್ಮದ ಕಾಯಿಲೆಗಳು ಇದ್ದರೆ ಅದು ಇನ್ನೊಬ್ಬರಿಗೆ ಹರಡಲಿಕ್ಕೂ ಕಾರಣವಾಗಬಹುದು. ಅಲ್ಲದೆ ವಿಕಲಚೇತನರಿಗೆ ದೇಹವನ್ನು ಅನಿವಾರ್ಯವಾಗಿ ತೆರೆದು ತೋರಿಸಬೇಕಾದ ಮುಜುಗರ ಉಂಟಾಗಬಹುದು, ಇದು ಅಮಾನನೀಯ. ಅಷ್ಟೇ ಅಲ್ಲ, ಭಾರತದ ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳ ಉಲ್ಲಂಘನೆ ಕೂಡ. ಹೀಗಾಗಿ ದೇವಸ್ಥಾನಗಳಲ್ಲಿ ಹಾಕಿರುವ 'ಕಡ್ಡಾಯವಾಗಿ ಅಂಗಿ-ಬನಿಯನ್​ ತೆಗೆದು ಪ್ರವೇಶ ಮಾಡಬೇಕು' ಎಂಬ ಫಲಕಗಳನ್ನು ತೆಗೆಸಬೇಕು. ಅಲ್ಲದೆ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಲು ಕೆಲವರನ್ನು ಬೆತ್ತ ಹಿಡಿದು ನಿಲ್ಲಿಸುವುದನ್ನೂ ಕೂಡ ನಿಲ್ಲಿಸಬೇಕು ಎಂದು ಎನ್​ಇಸಿಎಫ್ ಪ್ರತ ಮುಖೇನ ತಿಳಿಸಿದ್ದಲ್ಲದೆ, ತಮ್ಮ ಮನವಿಗೆ ಸಂಬಂಧಿಸಿದಂತೆ 15 ದಿನದ ಒಳಗೆ ಪ್ರತಿಕ್ರಿಯಿಸುವಂತೆಯೂ ಕೋರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments