Webdunia - Bharat's app for daily news and videos

Install App

ನಾಮ ನಿರ್ದೇಶಿತ ಸದಸ್ಯರ ಹೆಸರನ್ನು ಮತ ಪಟಿಯಿಂದ ತೆಗೆದುಬಿಡಿ

Webdunia
ಗುರುವಾರ, 9 ಡಿಸೆಂಬರ್ 2021 (15:09 IST)
ಆನೇಕಲ್‌ ಪುರಸಭೆಗೆ ನಾಮ ನಿರ್ದೇಶನಗೊಂಡಿರುವ 15 ಸದಸ್ಯರನ್ನು ವಿಧಾನ ಪರಿಷತ್ ಸದಸ್ಯರ ಚುನಾವಣೆಯ ಮತದಾರರ ಪಟ್ಟಿಯಿಂದ ಕೈಬಿಡುವಂತೆ ನಿರ್ದೇಶಿಸಬೇಕು' ಎಂದು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿದೆ.
 
ಈ ಸಂಬಂಧ ಬೆಂಗಳೂರು ನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯೂಸುಫ್‌ ಷರೀಫ್‌ (ಕೆಜಿಎಫ್‌ ಬಾಬು) ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
 
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, 'ನಾಮನಿರ್ದೇಶಿತ ಸದಸ್ಯರಿಗೆ ಪರಿಷತ್‌ ಚುನಾವಣೆಯಲ್ಲಿ ಮತದಾನದ ಹಕ್ಕು ನೀಡಿ ಮತದಾನದ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು, ಜನತಾ ಪ್ರತಿನಿಧಿ ಕಾಯ್ದೆ ಮತ್ತು ಸಂವಿಧಾನದ 243 (ಆರ್‌) (2) (a) (i) ವಿಧಿಗೆ ವಿರುದ್ಧವಾಗಿದೆ.ಇದಕ್ಕೆ ಸರ್ಕಾರದ ಹೆಚ್ಚುವರಿ ವಕೀಲ ಕೆ.ಆರ್.ನಿತ್ಯಾನಂದ, 'ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹಾಜರಾಗಿ ಈ ಸಂಬಂಧ ವಿವರಣೆ ನೀಡಲಿದ್ದಾರೆ. ಆದ್ದರಿಂದ ಕಾಲಾವಕಾಶ ನೀಡಬೇಕು' ಎಂದು ಕೋರಿದರು.
 
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಗುರುವಾರಕ್ಕೆ (ಡಿ.9) ಮುಂದೂಡಿದೆ. ಕೇಂದ್ರ ಚುನಾವಣಾ ಆಯುಕ್ತರು, ಬೆಂಗಳೂರು ನಗರ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾಧಿಕಾರಿಯೂ ಸೇರಿದಂತೆ ಒಟ್ಟು 15 ನಾಮನಿರ್ದೇಶಿತ ಸದಸ್ಯರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments