Webdunia - Bharat's app for daily news and videos

Install App

ಸಚಿವ ಸಂಪುಟದಿಂದ ದೇಶದ್ರೋಹಿ ಜಮೀರ್‌ ಅಹ್ಮದ್‌ರನ್ನು ಕಿತ್ತುಹಾಕಿ: ಆರ್ ಅಶೋಕ್ ಒತ್ತಾಯ

Sampriya
ಗುರುವಾರ, 19 ಸೆಪ್ಟಂಬರ್ 2024 (16:28 IST)
Photo Courtesy X
ಬೆಂಗಳೂರು: ಚಿಕ್ಕಮಗಳೂರು, ಕೋಲಾರ ಸೇರಿದಂತೆ ಹಲವೆಡೆ ಪ್ಯಾಲೆಸ್ತೇನಿ ಧ್ವಜ ಹಿಡಿದು ಓಡಾಟ ಮಾಡಿದರಲ್ಲಿ ತಪ್ಪೇನಿದೆ ಎಂದು ಸಚಿವ ಜಮೀರ್ ಅಹ್ಮದ್ ಸಮರ್ಥನೆಗೆ ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲೇ ಮತಾಂಧರು ತುಂಬಿರುವಾಗ ಇನ್ನು ಹೊರಗೆ ಇರುವ ಪುಂಡರು ಬಾಲ ಬಿಚ್ಚದೆ ಇರುತ್ತಾರೆಯೇ?

ಸಚಿವ ಜಮೀರ್‌ ಅಹ್ಮದ್ ಅವರ ಪ್ರಕಾರ ನಮ್ಮ ದೇಶದಲ್ಲಿ ಅನ್ಯ ದೇಶದ ಧ್ವಜವೂ ಹಾರಿಸಬಹುದು, ಅನ್ಯ ದೇಶದ ರಾಷ್ಟ್ರಗೀತೆಯನ್ನೂ ಹಾಡಬಹುದು, ಅನ್ಯ ದೇಶಕ್ಕೆ ಜಯಕಾರವೂ ಹಾಕಬಹುದು.

ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಹೋದಲ್ಲೆಲ್ಲ ಪ್ರದರ್ಶನ ಮಾಡುವ ಸಂವಿಧಾನ ಪುಸ್ತಕದಲ್ಲಿ ಅನ್ಯ ದೇಶದ ಲಾಂಛನಗಳನ್ನ ಪ್ರದರ್ಶನ ಮಾಡುವುದು ಸರಿ ಎಂದು ಉಲ್ಲೇಖ ಮಾಡಲಾಗಿದೆಯೇ?

ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ, ದೇಶಭಕ್ತಿ ಇದ್ದರೆ ಇಂತಹ ದೇಶದ್ರೋಹಿಗಳನ್ನ ಸಂಪುಟದಿಂದ ಕಿತ್ತು ಬಿಸಾಕಿ.

ಪ್ಯಾಲೆಸ್ತೇನಿ ಧ್ವಜ ಹಾರಾಟದ ಬಗ್ಗೆ ಜಮೀರ್ ಪ್ರತಿಕ್ರಿಯೆ ಹೀಗಿತ್ತು:

ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್​ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ. ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments