Select Your Language

Notifications

webdunia
webdunia
webdunia
webdunia

ರೇಣುಕಾಚಾರ್ಯಗೆ ಕೊಲೆ ಬೆದರಿಕೆ !

ರೇಣುಕಾಚಾರ್ಯಗೆ ಕೊಲೆ ಬೆದರಿಕೆ !
ಬೆಂಗಳೂರು , ಗುರುವಾರ, 31 ಮಾರ್ಚ್ 2022 (09:06 IST)
ಬೆಂಗಳೂರು : ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ.

ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. 

ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, ಹಲಾಲ್ ಕಟ್ ವಿಚಾರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದೀರಿ. ಇಷ್ಟು ದಿನ ಇಲ್ಲದ ಈ ವಿಚಾರಗಳು ನೀವು ಬಂದ ಮೇಲೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮ ಬಿಜೆಪಿ ನಾಯಕರ ಕಥೆ ಏನಾಗಲಿದೆ ನೋಡ್ತಿರಿ ಎಂದಿದ್ದಾನೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸತತ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ !