ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ ರೇಣುಕಾಚಾರ್ಯ

geetha
ಗುರುವಾರ, 8 ಫೆಬ್ರವರಿ 2024 (21:06 IST)
ಬೆಂಗಳೂರು-ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ.ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರ ಪಕ್ಷ ಸೇರ್ಪಡೆಯಾದ ನಂತರ ಅವರು ಮಾಧ್ಯಮದವರು ಜೊತೆ ಮಾತನಾಡಿದರು.
 
ಯುಪಿಎ ಅವಧಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿಎ ಸಮಯದಲ್ಲಿ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಕುರಿತು ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ಹೇಳಿದರು.ದೆಹಲಿಯಲ್ಲಿ ನಡೆದಿರುವುದು ಪ್ರತಿಭಟನೆಯಲ್ಲ. ಅದು ಕಾಂಗ್ರೆಸ್ ಕೃಪಾ ಪೋಷಕ ಪ್ರತಿಭಟನೆ.ದೆಹಲಿಯಲ್ಲಿ ಕರ್ನಾಟಕದ ಮಾನ ಮಾರ್ಯಾದೆ ಕಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ರಾಜ್ಯದ ಜನತೆಯ ಕ್ಷೆಮೆ ಕೇಳಬೇಕು ಎಂದು ಒತ್ತಾಯ ಮಾಡಿದರು.
 
ಮೊದಲು ದೇಶ ವಿಭಜನೆಯ ಹೇಳಿಕೆ ನೀಡಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಇನ್ನು ಮುಂದೆ ಇಂತಹ ಹೇಳಿಕೆ ನೀಡುವವರು ಯಾರೇ ಆದರೂ ಅಂತಹವರನ್ನು ನೇಣಿಗೆ ಹಾಕಲಿ ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments