Select Your Language

Notifications

webdunia
webdunia
webdunia
webdunia

ರೇಣುಕಾಚಾರ್ಯ ಸೋದರನ​​​​ ಪುತ್ರ ನಾಪತ್ತೆ..!

ರೇಣುಕಾಚಾರ್ಯ ಸೋದರನ​​​​ ಪುತ್ರ ನಾಪತ್ತೆ..!
davanagere , ಬುಧವಾರ, 2 ನವೆಂಬರ್ 2022 (16:24 IST)
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್‌ ಪುತ್ರ ನಾಪತ್ತೆ, ನಾಪತ್ತೆಯಾಗಿ 2 ದಿನವಾದ್ರೂ ಚಂದ್ರಶೇಖರ್‌ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 48 ಗಂಟೆ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ತೀವ್ರ ಹುಡುಕಾಟ ನಡೆಸುತ್ತಿದೆ. ಪ್ರಕರಣ ಗಂಭೀರವಾಗ್ತಿದ್ದಂತೆ ದಾವಣಗೆರೆ ಎಸ್ಪಿ ರಿಷ್ಯಂತ್ ಹೊನ್ನಾಳಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಚಂದ್ರಶೇಖರ್ ನಾಪತ್ತೆ ಬಗ್ಗೆ ತನಿಖೆ ನಡೆಯುತ್ತಿದೆ. ಶಿವಮೊಗ್ಗದಿಂದ ನ್ಯಾಮತಿ ಕಡೆ ಬಂದಿರುವ ಬಗ್ಗೆ ಮಾಹಿತಿ ಇದೆ. ಏನಾಗುತ್ತಿದೆ ಎಂಬುದರ ಬಗ್ಗೆ ಸದ್ಯಕ್ಕೆ ಹೇಳೋದಕ್ಕೆ ಆಗಲ್ಲ, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ರು. ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಚಂದ್ರಶೇಖರ್ ಅವರಿಗೆ ಭಾವುಕ ಸಂದೇಶ ಕಳುಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವಕನನ್ನು ಕೊಂದ ಚಿರತೆಗಳು ಪ್ರತ್ಯಕ್ಷ..!