Webdunia - Bharat's app for daily news and videos

Install App

ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ ಎಂದ ರೇಣುಕಾಚಾರ್ಯ

Webdunia
ಶುಕ್ರವಾರ, 5 ಆಗಸ್ಟ್ 2022 (14:50 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಹುಲ್ ಗಾಂಧಿ ಜೀರೋ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಮಾಡಿರುವುದು ಸಿದ್ದರಾಮಯ್ಯನವರ ಅಭಿಮಾನಿಗಳು.

ಕಾಂಗ್ರೆಸ್ನವರು ಈಗ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಅಂದುಕೊಂಡಿದ್ದಾರೆ. ಅಲ್ಲಿ ಬಂದಿರುವ 60 ಪರ್ಸೆಂಟ್ ಜನ ಸಿದ್ದರಾಮಯ್ಯ ಅಭಿಮಾನಿಗಳು. ನಾನು ಸಿದ್ದರಾಮಯ್ಯನವರ ಬಗ್ಗೆ ಟೀಕೆ ಮಾಡಲ್ಲ. ಸಿದ್ದರಾಮಯ್ಯನವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ. ಆದರೆ ಅವರು ಕಾಂಗ್ರೆಸ್ ಓಟರ್ಸ್ ಅಲ್ಲ.

ಕಾಂಗ್ರೆಸ್ ಒಂದು ರೀತಿ ಸತ್ತೇ ಹೋಗಿದೆ. ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ. ಬಸವರಾಜ್ ಬೊಮ್ಮಾಯಿ ಕೊಟ್ಟ ಅನೇಕ ಕಾರ್ಯಕ್ರಮಗಳು ಜನಪರವಾಗಿವೆ. ಕಾಂಗ್ರೆಸ್ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ನಮಗೇನೂ ಭಯ ಇಲ್ಲ.

ಆ ಕಾರ್ಯಕ್ರಮ ವಿರೋಧ ಮಾಡಿದ್ದು ಕಾಂಗ್ರೆಸ್ನವರೇ ಹೊರತು, ನಾವಲ್ಲಾ. ಬಿಜೆಪಿ ಜನಪರ ಕಾರ್ಯಕ್ರಮಗಳ ಬಗ್ಗೆ ರಾಜ್ಯಾದ್ಯಂತ ಕಾರ್ಯಕ್ರಮ ಮಾಡಲಿದೆ. ಆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಾವಣಗೆರೆಯಲ್ಲಿ ಮಾಡಲು ಸಿಎಂಗೆ ವಿನಂತಿ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments