Webdunia - Bharat's app for daily news and videos

Install App

ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ರೇಣುಕಾಚಾರ್ಯ

Webdunia
ಮಂಗಳವಾರ, 29 ಆಗಸ್ಟ್ 2023 (15:24 IST)
ದಾವಣಗೆರೆ : ಕರ್ನಾಟಕದಲ್ಲಿ ಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ. ರಾಜ್ಯ ನಾಯಕರ ಕೊಡುಗೆ ಏನ್ ಇದೆ? ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ಮೋದಿಯವರ ಜನಪ್ರಿಯ ಕಾರ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿಲ್ಲ. ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ನಮ್ಮ ರಾಜ್ಯದ ನಾಯಕರನ್ನು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ಪ್ರಚಾರ ಮಾಡ್ತಾ ಇದ್ದಾರೆ.

ಜನ ಸಾಮಾನ್ಯರು ಕೇಳ್ತಾ ಇದ್ದಾರೆ ರಾಜ್ಯ ನಾಯಕರನ್ನು ನೇಮಕ ಮಾಡಿಲ್ಲ ಎಂದು. ಕರ್ನಾಟಕದ ಬಿಜೆಪಿ ಆಡಳಿತವನ್ನು ಎಲ್ಲೋ ಒಂದು ಕಡೆ ಯಾರೋ ಒಬ್ಬರು ನಿಯಂತ್ರಣ ಮಾಡ್ತಾ ಇದ್ದಾರೆ. ಇದೇ ರೀತಿ ಮುಂದುವರಿದರೆ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಗುಡುಗಿದರು.

ಪಕ್ಷದಲ್ಲಿ ನಾಯಕರು ಇಲ್ಲ ಎಂದು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಆದರೆ ಹೋಗುವವರು ಹೋಗಲಿ, ಇರುವವರು ಇರಲಿ ಎಂದು ದುರಹಂಕಾರದ ಮಾತುಗಳನ್ನಾಡುತ್ತಿದ್ದಾರೆ. ಇದನ್ನೆಲ್ಲ ಬಿಡಬೇಕು. ಪಕ್ಷ ಸಂಘಟನೆ ಮಾಡಬೇಕು ಎಂದು ಸಂಸದ ಜಿಎಂ ಸಿದ್ದೇಶ್ವರ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments