Webdunia - Bharat's app for daily news and videos

Install App

ದರ್ಶನ್ ಆಂಡ್ ಗ್ಯಾಂಗ್ ಪೈಕಿ ನಾಲ್ವರಿಗೆ ಮಾತ್ರ ಲಾಯರ್ ಗಳು, ಉಳಿದವರ ಕತೆ ಗೋವಿಂದ

Krishnaveni K
ಶನಿವಾರ, 22 ಜೂನ್ 2024 (12:06 IST)
ಬೆಂಗಳೂರು: ಡಿ ಬಾಸ್ ಎಂದು ನಂಬಿ ಹಿಂದೆ ಹೋದ ಉಳಿದ ಆರೋಪಿಗಳು ಈಗ ಅಕ್ಷರಶಃ ಲಾಕ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಭಾವಿಗಳು ಹೇಗೋ ಲಾಯರ್ ನೇಮಿಸಿಕೊಂಡು ವಾದ ಮಾಡುತ್ತಿದ್ದಾರೆ. ಆದರೆ ಉಳಿದವರ ಕತೆ ಗೋವಿಂದ.

ಆರೋಪಿ ಪಟ್ಟಿಯಲ್ಲಿರುವ ಕೆಲವರಿಗೆ ನೇರವಾಗಿ ದರ್ಶನ್ ಜೊತೆ ಸಂಪರ್ಕವೇ ಇಲ್ಲ. ಆದರೆ ಇವರೆಲ್ಲರೂ ಈಗ ಡಿ ಬಾಸ್ ನೋಡುವ ಆಸೆಗೆ ಬಿದ್ದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೈ ಜೋಡಿಸಿ ಲಾಕ್ ಆಗಿದ್ದಾರೆ. ಈ ಕೇಸ್ ನಲ್ಲಿ ದರ್ಶನ್, ಪವಿತ್ರಾ ಗೌಡ, ರವಿ ಸೇರಿದಂತೆ ನಾಲ್ವರು ಆರೋಪಿಗಳ ಪರ ವಾದ ಮಂಡಿಸಲು ಪ್ರತ್ಯೇಕ ಲಾಯರ್ ನೇಮಿಸಲಾಗಿದೆ. ಆದರೆ ಉಳಿದ ಕೆಲವು ಆರೋಪಿಗಳು ತೀರಾ ಬಡತನದಲ್ಲಿದ್ದಾರೆ.

ಈ ಆರೋಪಿಗಳ ಆದಾಯವನ್ನೇ ನಂಬಿ ಕುಟುಂಬ ನಡೆಯುತ್ತಿತ್ತು. ಈಗ ಆರೋಪಿಗಳಾಗಿರುವುದರಿಂದ ಇವರ ಪರವಾಗಿ ನಿಲ್ಲಲು ಯಾರೂ ಇಲ್ಲ. ಲಾಯರ್ ನೇಮಿಸಲೂ ಹಣವಿಲ್ಲ ಎಂಬ ಪರಿಸ್ಥಿತಿಯಾಗಿದೆ. ದರ್ಶನ್ ಮೇಲಿನ ಅಭಿಮಾನ ಎಂದುಕೊಂಡು ಹಿಂದೆ ಹೋದ ಬಡಪಾಯಿಗಳ ಪಾಡು ಕೇಳುವವರೇ ಇಲ್ಲ ಎಂದಾಗಿದೆ.

ಪ್ರಕರಣದಲ್ಲಿ ಆರೋಪಿಯಾಗಿರುವ ನಂದೀಶ್ ಕುಟುಂಬ ಮಾಧ್ಯಮಗಳ ಮುಂದೆ ತಮ್ಮ ದುಸ್ಥಿತಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ನಮಗೆ ಲಾಯರ್ ನೇಮಿಸಬೇಕೆಂದರೆ ಯಾರಾದರೂ ಸಹಾಯ ಮಾಡಬೇಕು. ನಮ್ಮ ಕುಟುಂಬ ಅವನ ದುಡಿಮೆಯಿಂದಲೇ ನಡೆಯುತ್ತಿತ್ತು ಎಂದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಅಭಿಮಾನ ಎಂದು ಮಾಡಬಾರದ ಕೆಲಸಕ್ಕೆ ಕೈ ಜೋಡಿಸಲು ಹೋಗಿ ಈಗ ಈ ಬಡಪಾಯಿಗಳ ಸ್ಥಿತಿ ಕೇಳುವವರೇ ಇಲ್ಲ ಎಂಬಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments