Webdunia - Bharat's app for daily news and videos

Install App

ರೇಣುಕಾಸ್ವಾಮಿ ದೇಹ ಸಿಕ್ಕಿ ಇಂದಿಗೆ ಒಂದು ತಿಂಗಳು: ಅಂದು ಇದೇ ದಿನ ಏನಾಗಿತ್ತು

Krishnaveni K
ಮಂಗಳವಾರ, 9 ಜುಲೈ 2024 (12:13 IST)
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಗೊಳಗಾಗಿದ್ದಾನೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಮೃತದೇಹ ಸಿಕ್ಕಿ ಇಂದಿಗೆ ಒಂದು ತಿಂಗಳು ಕಳೆದಿದೆ. ಇದೇ ದಿನ ಜೂನ್ 9 ರಂದು ರೇಣುಕಾಸ್ವಾಮಿ ಮೃತದೇಹ ಸುಮನಹಳ್ಳಿ ಕಾಲುವೆಯಲ್ಲಿ ಸಿಕ್ಕಿತ್ತು.

ಜೂನ್ 8 ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಾರಿನಲ್ಲಿ ಕರೆತಂದು ಪಟ್ಟಣಗೆರೆ ಶೆಡ್ ನಲ್ಲಿರಿಸಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಾಕಷ್ಟು ಸಾಕ್ಷ್ಯಗಳೂ ಸಿಕ್ಕಿವೆ. ನಟ ದರ್ಶನ್ ಮತ್ತು ಗ್ಯಾಂಗ್ ಜೂನ್ 8 ರ ತಡರಾತ್ರಿ ರೇಣುಕಾಸ್ವಾಮಿ ಮೃತದೇಹವನ್ನು ಸುಮನಹಳ್ಳಿ ಕಾಲುವೆ ಬಳಿ ಬಿಸಾಕಿದ್ದರು.

ಇದೇ ದಿನ ಅಂದು ಬೆಳಿಗ್ಗೆ ರೇಣುಕಾಸ್ವಾಮಿ ಮೃತದೇಹವನ್ನು ಸತ್ವಾ ಅಪಾರ್ಟ್ ಮೆಂಟ್ ಸೆಕ್ಯುರಿಟಿ ಗಾರ್ಡ್ ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಪೊಲೀಸರು ಬಹುಶಃ ಅಪರಿಚಿತ ಶವ ಸಿಕ್ಕಿದೆ ಎಂದು ಕೇಸ್ ಸಾಧಾರಣ ಗತಿಯಲ್ಲಿ ತನಿಖೆ ನಡೆಸುತ್ತಿದ್ದರೇನೋ.

ಆದರೆ ನಟ ದರ್ಶನ್ ಆಪ್ತರು ಮರುದಿನ ಬಂದು ಪೊಲೀಸ್ ಠಾಣೆಯಲ್ಲಿ ಶರಣಾದ ಬಳಿಕ ಕೇಸ್ ಗೆ ಟ್ವಿಸ್ಟ್ ಸಿಕ್ಕಿತ್ತು. ಇದಾದ ಬಳಿಕ ದರ್ಶನ್ ಸಹಿತ ಹಲವು ಆರೋಪಿಗಳನ್ನು ಬಂಧಿಸಿ ಪೊಲೀಸರು  ವಿಚಾರಣೆ ನಡೆಸಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿತ್ತು. ಇದೀಗ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments