Webdunia - Bharat's app for daily news and videos

Install App

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

Krishnaveni K
ಭಾನುವಾರ, 8 ಜೂನ್ 2025 (20:53 IST)
ಚಿತ್ರದುರ್ಗ: ಜಿಲ್ಲೆಯ ರೇಣುಕಾಸ್ವಾಮಿ ಕೊಲೆಗೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿರುವ ತಂದೆ ಕಾಶೀನಾಥಯ್ಯ ಮಾನವೀಯತೆ ದೃಷ್ಟಿಯಿಂದಾದ್ರೂ ನಮ್ಮ ಸೊಸೆಗೆ ಸರ್ಕಾರೀ ನೌಕರಿ ಕೊಡಿಸಿ ಎಂದಿದ್ದಾರೆ.

ನಟ ದರ್ಶನ್ ಮತ್ತು ಸಹಚರರಿಂದ ಹಲ್ಲೆಗೊಳಗಾಗಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗೀಡಾಗಿದ್ದಾನೆ ಎನ್ನಲಾಗಿದೆ. ಆತ ಹತ್ಯೆಗೀಡಾಗುವಾಗ ಪತ್ನಿ ಗರ್ಭಿಣಿಯಾಗಿದ್ದಳು. ಇದೀಗ ಆತನಿಗೆ ಗಂಡು ಮಗುವಾಗಿದ್ದು ಪತಿಯಿಲ್ಲದೇ ಪತ್ನಿ ಏಕಾಂಗಿ ಜೀವನ ನಡೆಸುತ್ತಿದ್ದಾಳೆ.

ಇಂದು ಮಗನ ಹತ್ಯೆಯಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಣ್ಣೀರು ಹಾಕಿದ್ದಾರೆ. ಪುತ್ರ ಶೋಕ ನಿರಂತರಂ ಎನ್ನುವಂತೆ ಮಗನ ಸಾವನ್ನು ನಮಗೆ ಮರೆಯಲು ಸಾಧ್ಯವಾಗುತ್ತಿಲ್ಲ. ಆದರೂ ನಮ್ಮ ಮೊಮ್ಮಗನ ಆಟ-ಪಾಠದಲ್ಲಿ ಮರೆಯುವ ಪ್ರಯತ್ನ ಮಾಡುತ್ತಿದ್ದೇವೆ.

ಆದರೆ ನಮ್ಮ ಸೊಸೆ ಸಣ್ಣ ವಯಸ್ಸಿನಾಕೆ. ಈಗಾಗಲೇ ಸರ್ಕಾರ, ಮಾಧ್ಯಮಗಳು ಕೋರ್ಟು, ಕಚೇರಿ ಎಂದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಆದರೆ ಸೊಸೆಗೆ ಸರ್ಕಾರಿ ಕೆಲಸ ಕೊಡಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ಆಕೆಗೆ ಸರ್ಕಾರಿ ಕೆಲಸ ಕೊಡಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಆದರೂ ಮಾನವೀಯತೆ ದೃಷ್ಟಿಯಿಂದ ಆಕೆಗೆ ಕೆಲಸ ಕೊಡಿಸಿ, ಜೀವನಕ್ಕೆ ದಾರಿ ಮಾಡಿಕೊಡಿ ಎಂದು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments