Webdunia - Bharat's app for daily news and videos

Install App

ಸೊಸೆ ಸರ್ಕಾರೀ ಕೆಲಸ ಕೊಡಿಸಿ ಸ್ವಾಮೀ: ಚಿತ್ರದುರ್ಗ ಡಿಸಿ ಮುಂದೆ ರೇಣುಕಾಸ್ವಾಮಿ ತಂದೆ ಬೇಡಿಕೆ

Krishnaveni K
ಗುರುವಾರ, 25 ಜುಲೈ 2024 (14:32 IST)
ಚಿತ್ರದುರ್ಗ: ನನ್ನ ಮಗ ಕೊಲೆಯಾದ ಬಳಿಕ ನಮ್ಮ ಮನೆಗಿದ್ದ ಏಕೈಕ ಆಧಾರವೂ ಇಲ್ಲದಾಗಿದೆ. ನನ್ನ ಸೊಸೆಗೆ ಸರ್ಕಾರೀ ನೌಕರಿ ಕೊಡಿಸಿ ಎಂದು ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ತಂದೆ ಚಿತ್ರದುರ್ಗ ಡಿಸಿಗೆ ಮನವಿ ಮಾಡಿದ್ದಾರೆ.

ಇಂದು ಚಿತ್ರದುರ್ಗ ಡಿಸಿ ವೆಂಕಟೇಶ್ ಅವರನ್ನು ಭೇಟಿಯಾದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಮತ್ತು ಪತ್ನಿ ಸಹನಾ ಸರ್ಕಾರೀ ನೌಕರಿ ಕೊಡಿಸುವಂತೆ ಮನವಿ ಮಾಡಿದ್ದಾರೆ. ಈ  ಮೊದಲು ಕಾಶೀನಾಥಯ್ಯ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅನುಕಂಪದ ಆಧಾರದಲ್ಲಿ ಸರ್ಕಾರೀ ನೌಕರಿ ಕೊಡಿಸಲು ಮನವಿ ಮಾಡಿದ್ದರು. ಈ ವೇಳೆ ಸಿಎಂ ಕೂಡಾ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಆದರೆ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರೀ ನೌಕರಿ ಕೊಡಿಸುವುದರ ಬಗ್ಗೆಭಾರೀ ಟೀಕೆ ಕೇಳಿಬಂದಿತ್ತು. ರೇಣುಕಾಸ್ವಾಮಿ ದೇಶ ಸೇವೆ ಮಾಡಿ ಸಾಯಲಿಲ್ಲ. ಆತ ಹತ್ಯೆಯಾಗಿರುವುದಕ್ಕೆ ಕುಟುಂಬದ ಬಗ್ಗೆ ಸಂತಾಪವಿದೆ. ಆದರೆ ಆತ ಕೂಡಾ ಅಮಾಯಕನೇನಲ್ಲ. ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಅಂತಹ ವ್ಯಕ್ತಿಯನ್ನು ಕೊಲೆ ಮಾಡಿರುವುದು ತಪ್ಪಿರಬಹುದು. ಆದರೆ ಅದಕ್ಕಾಗಿ ಸರ್ಕಾರೀ ನೌಕರಿ ಕೊಡುವುದು ಯಾಕೆ? ಇದರ ಬದಲು ದೇಶಕ್ಕಾಗಿ ಪ್ರಾಣ ಕಳೆದುಕೊಂಡ ಇಲ್ಲವೇ ಬೇರೆ ಎಷ್ಟೋ ಕಾರಣಗಳಿಗೆ ಸಾವನ್ನಪ್ಪಿರುವ ಕುಟುಂಬಗಳಿಗೆ ಸಹಾಯ ಮಾಡಿ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸರ್ಕಾರೀ ನೌಕರಿ ಕೊಟ್ಟರೆ ತಪ್ಪು ಸಂದೇಶ ಕೊಟ್ಟಂತಾಗುತ್ತದೆ. ಬೇಕಿದ್ದರೆ ಅವರಿಗೆ ಧನ ಸಹಾಯ ಮಾಡಲಿ ಸಾಕು ಎಂದು ಸಾರ್ವಜನಿಕರಿಂದ ಅಭಿಪ್ರಾಯ ಕೇಳಿಬಂದಿತ್ತು.

ಸಿಎಂಗೇ ಮನವಿ ಮಾಡಿದ್ದರೂ ಇದುವರೆಗೆ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರೀ ನೌಕರಿ ಸಿಕ್ಕಿರಲಿಲ್ಲ. ಆಶ್ವಾಸನೆಯಾಗಿಯೇ ಉಳಿದಿತ್ತು. ಈ ಹಿನ್ನಲೆಯಲ್ಲಿ ಇಂದು ರೇಣುಕಾಸ್ವಾಮಿ ತಂದೆ ಚಿತ್ರದುರ್ಗ ಡಿಸಿಯನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments