Webdunia - Bharat's app for daily news and videos

Install App

ಸೊಸೆಗೆ ಸರ್ಕಾರ ಖಾಯಂ ನೌಕರಿ ಕೊಡಕ್ಕೆ ಮನಸ್ಸು ಮಾಡ್ಲಿ: ರೇಣುಕಾಸ್ವಾಮಿ ತಂದೆಯಿಂದ ಮತ್ತೆ ಡಿಮ್ಯಾಂಡ್

Krishnaveni K
ಶನಿವಾರ, 7 ಡಿಸೆಂಬರ್ 2024 (09:38 IST)
ಚಿತ್ರದುರ್ಗ: ದರ್ಶನ್ ಆಂಡ್ ಗ್ಯಾಂಗ್ ನಿಂದ ಹತನಾಗಿದ್ದಾನೆ ಎನ್ನಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರ ಖಾಯಂ ಸರ್ಕಾರೀ ನೌಕರಿ ಕೊಡಲಿ ಎಂದು ರೇಣುಕಾ ತಂದೆ ಮತ್ತೆ ಡಿಮ್ಯಾಂಡ್ ಮಾಡಿದ್ದಾರೆ.

ನಿನ್ನೆ ರೇಣುಕಾಸ್ವಾಮಿ ಮನೆಯಲ್ಲಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಪೂಜೆ ನಡೆಸಲಾಗಿತ್ತು. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿಗಾಗಿ ರಂಭಾಪುರಿ ಶ್ರೀಗಳು ಪೂಜೆ ಮಾಡಿದ್ದರು. ಇದಾದ ಬಳಿಕ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯನವರನ್ನು ಮಾಧ್ಯಮಗಳು ಮಾತನಾಡಿಸಿವೆ.

ಈ ವೇಳೆ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ. ‘ನಮ್ಮ ಜಗದ್ಗುರುಗಳಾದ ರಂಭಾಪುರ ಶ್ರೀಗಳು ನಮ್ಮ ಮನೆಗೆ ಬಂದು ಪೂಜೆ ಮಾಡಿ ನಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿ ಹೋಗಿದ್ದಾರೆ. ನಿಮಗೆ ಒಳ್ಳೆಯದಾಗುತ್ತದೆ ಎಂದು ಹೇಳಿ ಹೋಗಿದ್ದಾರೆ. ನಾವು ಇಲ್ಲಿಯವರೆಗೂ ನ್ಯಾಯಾಂಗ, ಪೊಲೀಸರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ಮುಂದೆಯೂ ಇರುತ್ತದೆ. ಇದರ ಜೊತೆಗೆ ನಮ್ಮ ಸೊಸೆ ಸಹಾನುಭೂತಿಯಿಂದ ಸರ್ಕಾರ ಒಂದು ಸರ್ಕಾರಿ ಖಾಯಂ ನೌಕರಿ ಕೊಡಲಿ ಎಂದು ಕೇಳಿಕೊಳ್ಳುತ್ತೇವೆ’ ಎಂದು ಕಾಶೀನಾಥಯ್ಯ ಮಾಧ್ಯಮಗಳು ಮುಂದೆ ಕಣ್ಣೀರು ಹಾಕಿದ್ದಾರೆ.

‘ಸದ್ಯಕ್ಕೆ ನನ್ನ ಸೊಸೆ, ಮೊಮ್ಮಗು ಮನೆಯಲ್ಲಿಲ್ಲ. ಅವರ ತವರು ಮನೆಯಲ್ಲಿದ್ದಾರೆ. ಅವರು ಇಲ್ಲಿ ಇದ್ದಿದ್ರೆ ಚೆನ್ನಾಗಿರುತ್ತಿತ್ತು. ಗುರುಗಳು ಈ ಕಡೆ ಬಂದಾಗ ಮನೆಗೆ ಬಂದು ಪೂಜೆ ಮಾಡಿ ಹೋಗಿದ್ದಾರೆ. ನಿನ್ನೆಯೇ ಬಂದು ಮನೆಯಲ್ಲಿ ವಾಸ್ತವ್ಯ ಹೂಡಿ ಪೂಜೆ ಮಾಡಿ ಹೋಗಿದ್ದಾರೆ. ಗುರುಗಳ ದಯೆಯಿಂದ ನಮಗೆ ಎಲ್ಲಾ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments