Webdunia - Bharat's app for daily news and videos

Install App

ನಾವು ಯಾರ ಜೊತೆಗೂ ಸಂಧಾನಕ್ಕೆ ರೆಡಿ ಇಲ್ಲ, ನಮ್ಮ ಸೊಸೆಗೆ ಒಂದು ಸರ್ಕಾರಿ ನೌಕರಿ ಕೊಡ್ಸಿ ಸಾಕು: ರೇಣುಕಾಸ್ವಾಮಿ ತಂದೆ ಕಣ್ಣೀರು

Krishnaveni K
ಶುಕ್ರವಾರ, 26 ಜುಲೈ 2024 (15:16 IST)
ಚಿತ್ರದುರ್ಗ: ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಗೀಡಾಗಿದ್ದಾರೆ  ಎನ್ನಲಾದ ರೇಣುಕಾಸ್ವಾಮಿ ಕುಟುಂಬಸ್ಥರನ್ನು ಇಂದು ನಟ ವಿನೋದ್ ರಾಜ್ ಭೇಟಿ ಮಾಡಿದರು. ಈ ವೇಳೆ ರೇಣುಕಾಸ್ವಾಮಿ ತಂದೆ ಮಾಧ್ಯಮಗಳಲ್ಲಿ ತಮ್ಮ ಬಗ್ಗೆ ಸಂಧಾನದ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

ಇಂದು ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿಯಾದ ನಟ ವಿನೋದ್ ರಾಜ್ 1 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ತಮ್ಮಿಂದಾದ ಸಹಾಯ ಮಾಡುವುದಾಗಿ ಹೇಳಿದರು. ಈ ವೇಳೆ ವಿನೋದ್ ರಾಜ್ ಗೆ ಧನ್ಯವಾದ ಸಲ್ಲಿಸಿದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ತಮ್ಮ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗೂ ಕಣ್ಣೀರು ಹಾಕುತ್ತಲೇ ಸ್ಪಷ್ಟನೆ ನೀಡಿದರು.

ಮಾಧ್ಯಮಗಳಲ್ಲಿ ಎರಡು ದಿನಗಳ ಹಿಂದೆ ರೇಣುಕಾಸ್ವಾಮಿ ಕುಟುಂಬ ನಟ ದರ್ಶನ್ ಜೊತೆ ಕಾಂಪ್ರಮೈಸ್ ಮಾಡಿಕೊಳ್ಳಬಹುದು ಎಂಬ ಸುದ್ದಿ ಬಂದಿತ್ತು. ಈ ಬಗ್ಗೆ ಇಂದು ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಸ್ಪಷ್ಟನೆ ನೀಡಿದರು. ನಾವು ಕಾನೂನಿನ ರೀತಿ ಏನು ಆಗಬೇಕೋ ಆ ರೀತಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಬಯಸುತ್ತೇವೆ ಎಂದಿದ್ದಾರೆ.

‘ನಮ್ಮ ಮಗನನ್ನು ಕೊಂದವರು ಯಾರು ಎಂದು ನಮಗೆ ಗೊತ್ತಿಲ್ಲ. ಯಾರೇ ಆದರೂ ಅವರಿಗೆ ತಕ್ಕ ಶಿಕ್ಷೆಯಾಗಲಿ. ನನ್ನ ತಾಯಿ 98 ವರ್ಷ ಹಾಸಿಗೆ ಹಿಡಿದಿದ್ದಾರೆ. ರೇಣುಕಾಸ್ವಾಮಿಯೇ ಅವರನ್ನು ಎಲ್ಲಾ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದ. ಈಗ ನಮಗೆ ಯಾರಿದ್ದಾರೆ? ನನ್ನ ಮಗನ ಕೊಲೆ ವಿಚಾರದಲ್ಲಿ ನಾವು ಸಂಧಾನಕ್ಕೆ ಸಿದ್ಧ ಎಂದು ಮಾಧ್ಯಮಗಳಲ್ಲಿ ಬಂದಿದ್ದು ಇದಕ್ಕೆ ಸ್ಪಷ್ಟನೆ ನೀಡುತ್ತೇನೆ. ನಾವು ಯಾವ ಸಂಧಾನಕ್ಕೂ ಹೋಗುತ್ತಿಲ್ಲ. ನಮ್ಮ ಮಗನ ಸಾವಿಗೆ ಕಾನೂನಿನ ರೀತಿಯೇ ನ್ಯಾಯ ಸಿಗಲಿ ಎಂದು ಬಯಸುತ್ತೇವೆ. ನನ್ನ ಸೊಸೆಗೆ ಸರ್ಕಾರಿ ಖಾಯಂ ನೌಕರಿ ಕೊಡಿ ಎಂದು ಕೇಳಿಕೊಳ್ಳುತ್ತೇವೆ ಅಷ್ಟೇ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments