Webdunia - Bharat's app for daily news and videos

Install App

ದರ್ಶನ್ ರಿಂದಾಗಿ ಬೀದಿಗೆ ಬಂದ ಆರೋಪಿ ರವಿ ಪತ್ನಿ, ಮಕ್ಕಳು

Krishnaveni K
ಗುರುವಾರ, 27 ಜೂನ್ 2024 (12:15 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೊತೆಗೆ ಬಂಧಿತರಾಗಿರುವ ಆರೋಪಿ ರವಿ ಕುಟುಂಬ ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬೀದಿಗೆ ಬಂದಿದೆ.

ದರ್ಶನ್ ಆದೇಶದಂತೆ ರಾಘವೇಂದ್ರ, ಅನುಕುಮಾರ್ ಇದೇ ರವಿಶಂಕರ್ ಕಾರಿನಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆ ತಂದಿದ್ದರು. ಇದೀಗ ರವಿ ಕೂಡಾ ಪ್ರಕರಣದಲ್ಲಿ 8 ನೇ ಆರೋಪಿಯಾಗಿ ಜೈಲು ಸೇರಿದ್ದಾನೆ. ಆದರೆ ರವಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ.

ದರ್ಶನ್ ದೆಸೆಯಿಂದಾಗಿ ರವಿ ಕುಟುಂಬ ಈಗ ಬೀದಿಗೆ ಬಿದ್ದಿದೆ. ರವಿ ದುಡಿದು ತರುತ್ತಿದ್ದ ಹಣದಲ್ಲಿ ಜೀವನ ಸಾಗುತ್ತಿತ್ತು. ಆದರೆ ಈಗ ರವಿ ಬಂಧಿತರಾಗಿರುವುದರಿಂದ ಕುಟುಂಬ ಹಣವಿಲ್ಲದೇ ಜೀವನ ಸಾಗಿಸಲು ಹೆಣಗಾಡುತ್ತಿದೆ. ರವಿ ತಾಯಿ ಅನಾರೋಗ್ಯ ಪೀಡಿತರಾಗಿದ್ದು ಅವರಿಗೆ ಔಷಧಿ ತರಲೂ ದುಡ್ಡಿಲ್ಲದ ಪರಿಸ್ಥಿತಿಯಾಗಿದೆ.

ಇನ್ನು ರವಿ ಮಕ್ಕಳನ್ನು ಶಾಲೆಗೆ ಫೀಸ್ ಕಟ್ಟಲಾಗದೇ ತಾಯಿಯೇ ಶಾಲೆ ಬಿಡಿಸಿದ್ದಾರೆ. ರವಿ ಇಲ್ಲದೇ ಈಗ ಕುಟುಂಬ ಸರಿದೂಗಿಸುವುದೇ ಪತ್ನಿಗೆ ತಲೆನೋವಾಗಿದೆ. ಯಾರೂ ಸಹಾಯಕ್ಕೆ ಬರುತ್ತಿಲ್ಲ. ಗಂಡನನ್ನು ಬಿಡಿಸಿಕೊಳ್ಳಲೂ ದುಡ್ಡಿಲ್ಲ ಎನ್ನುವ ಪರಿಸ್ಥಿತಿಯಾಗಿದೆ. ದರ್ಶನ್ ದೆಸೆಯಿಂದಾಗಿ ಈ ಕುಟುಂಬ ಈಗ ಬೀದಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments