ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಿಂದ ಹೊರಬಂದ ಎ13 ಆರೋಪಿ ದೀಪಕ್ ಕುಮಾರ್‌

Sampriya
ಗುರುವಾರ, 17 ಅಕ್ಟೋಬರ್ 2024 (16:42 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಎ13 ಆರೋಪಿ ದೀಪಕ್ ಕುಮಾರ್ ಗುರುವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ದೀಪಕ್ ಕುಮಾರ್‌ಗೆ ಸೋಮವಾರ ಕೋರ್ಟ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಕೋರ್ಟ್ ನೀಡಿರುವ ಷರತ್ತುಗಳನ್ನು ಪೂರೈಸಿ ಜೈಲಿಗೆ ಬೇಲ್ ಕಾಪಿ ತಲುಪಿತ್ತು. ಬುಧವಾರ ರಾತ್ರಿ ಬೇಲ್ ಕಾಪಿ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕೈಸೇರಿತ್ತು. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ದೀಪಕ್ ಕುಮಾರ್ ಬಿಡುಗಡೆಯಾಗಿದ್ದಾನೆ.  

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತು ಮೊದಲನೇ ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ, ದರ್ಶನ್ ಮ್ಯಾನೇಜರ್ ಆಗಿದ್ದ 11ನೇ ಆರೋಪಿ ಆರ್. ನಾಗರಾಜು ಹಾಗೂ 12ನೇ ಆರೋಪಿ ಎಂ. ಲಕ್ಷ್ಮಣ್ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.  

ಎಂಟನೇ ಆರೋಪಿ ರವಿಶಂಕರ್ ಅಲಿಯಾಸ್ ರವಿ, 13ನೇ ಆರೋಪಿ ದೀಪಕ್ ಕುಮಾರ್ ಅಲಿಯಾಸ್ ದೀಪಕ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ ಮತ್ತು ನಿಖಿಲ್ ನಾಯಕ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದರೊಂದಿಗೆ 17 ಆರೋಪಿಗಳ ಪೈಕಿ ಐವರಿಗೆ ಜಾಮೀನು ಮಂಜೂರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ಮುಂದಿನ ಸುದ್ದಿ
Show comments