ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಮರ್ಡರ್ ಆರೋಪಿಗಳು

Krishnaveni K
ಬುಧವಾರ, 2 ಅಕ್ಟೋಬರ್ 2024 (12:08 IST)
ತುಮಕೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿದ್ದ 16 ಆರೋಪಿಗಳ ಪೈಕಿ ಮೂವರು ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
 

ಎ15,ಎ16 ಮತ್ತು ಎ17 ಆರೋಪಿಗಳಾದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ 57 ನೇ ಸಿಸಿಎಚ್ ಕೋರ್ಟ್ ಸೆಪ್ಟೆಂಬರ್ 23 ರಂದೇ ಜಾಮೀನು ಮಂಜೂರು ಮಾಡಿತ್ತು. ಈ ಮೂವರು ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿರಲಿಲ್ಲ. ಸಾಕ್ಷ್ಯ ನಾಶ ಕೇಸ್ ಮಾತ್ರ ಇತ್ತು.

ಹೀಗಾಗಿ ಮೂವರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಮೂವರಿಗೂ ಶ್ಯೂರಿಟಿ ಸಿಗದೇ ಬಿಡುಗಡೆ ಪ್ರಕ್ರಿಯೆ ನಡೆದಿರಲಿಲ್ಲ. ಶ್ಯೂರಿಟಿ ಸಿಗದೇ ಇಷ್ಟು ದಿನ ಮೂವರು ಅನಗತ್ಯವಾಗಿ ಜೈಲಿನಲ್ಲಿ ಕಾಲ ಕಳೆಯುವಂತಾಗಿತ್ತು. ಇದೀಗ ಕೊನೆಗೂ ಶ್ಯೂರಿಟಿ ವ್ಯವಸ್ಥೆಯಾಗಿದ್ದು ನಿನ್ನೆ ರಾತ್ರಿಯೇ ಜೈಲು ಅಧಿಕಾರಿಗಳಿಗೆ ಜಾಮೀನು ಪ್ರತಿ ಮೇಲ್ ಮಾಡಲಾಗಿತ್ತು.

ಇಂದು ಮೂವರೂ ಬಿಡುಗಡೆಯಾಗಿ ತುಮಕೂರು ಜೈಲಿನಿಂದ ಹೊರಬಂದಿದ್ದಾರೆ.  ಈ ಮೂಲಕ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮೂವರಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ.  ಆದರೆ ಇವರ ಮೇಲೆ ಇನ್ನೂ ಕೇಸ್ ಹಾಗೆಯೇ ಇದ್ದು ವಿಚಾರಣೆಗೆ ಹಾಜರಾಗಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments