Daily Horoscope

ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಮರ್ಡರ್ ಆರೋಪಿಗಳು

Krishnaveni K
ಬುಧವಾರ, 2 ಅಕ್ಟೋಬರ್ 2024 (12:08 IST)
ತುಮಕೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿದ್ದ 16 ಆರೋಪಿಗಳ ಪೈಕಿ ಮೂವರು ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
 

ಎ15,ಎ16 ಮತ್ತು ಎ17 ಆರೋಪಿಗಳಾದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ 57 ನೇ ಸಿಸಿಎಚ್ ಕೋರ್ಟ್ ಸೆಪ್ಟೆಂಬರ್ 23 ರಂದೇ ಜಾಮೀನು ಮಂಜೂರು ಮಾಡಿತ್ತು. ಈ ಮೂವರು ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿರಲಿಲ್ಲ. ಸಾಕ್ಷ್ಯ ನಾಶ ಕೇಸ್ ಮಾತ್ರ ಇತ್ತು.

ಹೀಗಾಗಿ ಮೂವರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಮೂವರಿಗೂ ಶ್ಯೂರಿಟಿ ಸಿಗದೇ ಬಿಡುಗಡೆ ಪ್ರಕ್ರಿಯೆ ನಡೆದಿರಲಿಲ್ಲ. ಶ್ಯೂರಿಟಿ ಸಿಗದೇ ಇಷ್ಟು ದಿನ ಮೂವರು ಅನಗತ್ಯವಾಗಿ ಜೈಲಿನಲ್ಲಿ ಕಾಲ ಕಳೆಯುವಂತಾಗಿತ್ತು. ಇದೀಗ ಕೊನೆಗೂ ಶ್ಯೂರಿಟಿ ವ್ಯವಸ್ಥೆಯಾಗಿದ್ದು ನಿನ್ನೆ ರಾತ್ರಿಯೇ ಜೈಲು ಅಧಿಕಾರಿಗಳಿಗೆ ಜಾಮೀನು ಪ್ರತಿ ಮೇಲ್ ಮಾಡಲಾಗಿತ್ತು.

ಇಂದು ಮೂವರೂ ಬಿಡುಗಡೆಯಾಗಿ ತುಮಕೂರು ಜೈಲಿನಿಂದ ಹೊರಬಂದಿದ್ದಾರೆ.  ಈ ಮೂಲಕ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮೂವರಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ.  ಆದರೆ ಇವರ ಮೇಲೆ ಇನ್ನೂ ಕೇಸ್ ಹಾಗೆಯೇ ಇದ್ದು ವಿಚಾರಣೆಗೆ ಹಾಜರಾಗಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments