ದರ್ಶನ್, ಪವಿತ್ರಾ ಗೌಡ ಎಸ್ಕೇಪ್: ಅನುಕುಮಾರ್, ಜಗದೀಶ್ ಗೆ ಜಾಮೀನು ಸಿಕ್ಕರೂ ಶ್ಯೂರಿಟಿ ಕೊಡುವವರಿಲ್ಲ

Krishnaveni K
ಮಂಗಳವಾರ, 17 ಡಿಸೆಂಬರ್ 2024 (10:59 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ದೊಡ್ಡ ಕುಳಗಳು ಈಗಾಗಲೇ ಜಾಮೀನು ಪಡೆದು ರಿಲೀಸ್ ಆಗಿದ್ದಾರೆ. ಆದರೆ ಇವರನ್ನು ನಂಬಿ ಹೋದ ಬಡಕುಟುಂಬದ ಅನುಕುಮಾರ್ ಮತ್ತು  ಜಗದೀಶ್ ಗೆ ಜಾಮೀನು ಸಿಕ್ಕರೂ ಬಿಡುಗಡೆಯ ಭಾಗ್ಯವಿಲ್ಲ
ಒಟ್ಟು ಏಳು ಆರೋಪಿಗಳಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಆದರೆ ನಿನ್ನೆಯಷ್ಟೇ ಶ್ಯೂರಿಟಿ ನೀಡಿ ಕಾನೂನು ಪ್ರಕ್ರಿಯೆಗಳು ಮುಗಿದಿತ್ತು. ಅದರಂತೆ ದರ್ಶನ್ ಈಗಾಗಲೇ ರಿಲೀಸ್ ಆಗಿದ್ದು ಪವಿತ್ರಾ ಗೌಡ ಇಂದು ರಿಲೀಸ್ ಆಗಿದ್ದಾರೆ. ಉಳಿದಂತೆ ನಾಗರಾಜ್, ಲಕ್ಷ್ಮಣ್, ಪ್ರದೋಷ್ ಇಂದು ಬಿಡುಗಡೆಯಾಗಲಿದ್ದಾರೆ. ಇವರೆಲ್ಲರಿಗೂ ಶ್ಯೂರಿಟಿ ಸಿಕ್ಕಿದೆ.

ಆದರೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಇನ್ನಿಬ್ಬರು ಅರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಗೆ ಇನ್ನೂ ಯಾರೂ ಶ್ಯೂರಿಟಿ ನೀಡಲು ಮುಂದೆ ಬಂದಿಲ್ಲ. ಈ ಕಾರಣಕ್ಕೆ ಈ ಇಬ್ಬರೂ ಇನ್ನೂ ಜೈಲಿನಿಂದ ರಿಲೀಸ್ ಆಗಿಲ್ಲ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತರಲು ಅನುಕುಮಾರ್ ಸಹಾಯ ಮಾಡಿದ್ದ.

ಬಾಸ್ ಬಾಸ್ ಎಂದು ಹಿಂದೆ ಹೋಗಿ ಈ ಎಲ್ಲರೂ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ವಿಪರ್ಯಾಸವೆಂದರೆ ಈಗ ಇವರಿಗೆ ಶ್ಯೂರಿಟಿ ನೀಡುವವರೂ ಇಲ್ಲದೇ ಒದ್ದಾಡುತ್ತಿದ್ದಾರೆ. ಇದಿಗ ದರ್ಶನ್ ಸಹಾಯದ ನಿರೀಕ್ಷೆಯಲ್ಲಿ ಈ ಕುಟುಂಬಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments