Webdunia - Bharat's app for daily news and videos

Install App

ದರ್ಶನ್, ಪವಿತ್ರಾ ಗೌಡ ಎಸ್ಕೇಪ್: ಅನುಕುಮಾರ್, ಜಗದೀಶ್ ಗೆ ಜಾಮೀನು ಸಿಕ್ಕರೂ ಶ್ಯೂರಿಟಿ ಕೊಡುವವರಿಲ್ಲ

Krishnaveni K
ಮಂಗಳವಾರ, 17 ಡಿಸೆಂಬರ್ 2024 (10:59 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ದೊಡ್ಡ ಕುಳಗಳು ಈಗಾಗಲೇ ಜಾಮೀನು ಪಡೆದು ರಿಲೀಸ್ ಆಗಿದ್ದಾರೆ. ಆದರೆ ಇವರನ್ನು ನಂಬಿ ಹೋದ ಬಡಕುಟುಂಬದ ಅನುಕುಮಾರ್ ಮತ್ತು  ಜಗದೀಶ್ ಗೆ ಜಾಮೀನು ಸಿಕ್ಕರೂ ಬಿಡುಗಡೆಯ ಭಾಗ್ಯವಿಲ್ಲ
ಒಟ್ಟು ಏಳು ಆರೋಪಿಗಳಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಆದರೆ ನಿನ್ನೆಯಷ್ಟೇ ಶ್ಯೂರಿಟಿ ನೀಡಿ ಕಾನೂನು ಪ್ರಕ್ರಿಯೆಗಳು ಮುಗಿದಿತ್ತು. ಅದರಂತೆ ದರ್ಶನ್ ಈಗಾಗಲೇ ರಿಲೀಸ್ ಆಗಿದ್ದು ಪವಿತ್ರಾ ಗೌಡ ಇಂದು ರಿಲೀಸ್ ಆಗಿದ್ದಾರೆ. ಉಳಿದಂತೆ ನಾಗರಾಜ್, ಲಕ್ಷ್ಮಣ್, ಪ್ರದೋಷ್ ಇಂದು ಬಿಡುಗಡೆಯಾಗಲಿದ್ದಾರೆ. ಇವರೆಲ್ಲರಿಗೂ ಶ್ಯೂರಿಟಿ ಸಿಕ್ಕಿದೆ.

ಆದರೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಇನ್ನಿಬ್ಬರು ಅರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಗೆ ಇನ್ನೂ ಯಾರೂ ಶ್ಯೂರಿಟಿ ನೀಡಲು ಮುಂದೆ ಬಂದಿಲ್ಲ. ಈ ಕಾರಣಕ್ಕೆ ಈ ಇಬ್ಬರೂ ಇನ್ನೂ ಜೈಲಿನಿಂದ ರಿಲೀಸ್ ಆಗಿಲ್ಲ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತರಲು ಅನುಕುಮಾರ್ ಸಹಾಯ ಮಾಡಿದ್ದ.

ಬಾಸ್ ಬಾಸ್ ಎಂದು ಹಿಂದೆ ಹೋಗಿ ಈ ಎಲ್ಲರೂ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ವಿಪರ್ಯಾಸವೆಂದರೆ ಈಗ ಇವರಿಗೆ ಶ್ಯೂರಿಟಿ ನೀಡುವವರೂ ಇಲ್ಲದೇ ಒದ್ದಾಡುತ್ತಿದ್ದಾರೆ. ಇದಿಗ ದರ್ಶನ್ ಸಹಾಯದ ನಿರೀಕ್ಷೆಯಲ್ಲಿ ಈ ಕುಟುಂಬಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments