Webdunia - Bharat's app for daily news and videos

Install App

ಪದೇ ಪದೇ ನ್ಯಾಯವಾದಿಗಳ ಮೇಲೆ ಹಲ್ಲೆ ಆಗೋದ್ಯಾಕೆ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (19:26 IST)
ನ್ಯಾಯವಾದಿಗಳ ಮೇಲಾಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ನ್ಯಾಯವಾದಿಗಳ ಮೇಲೆ ಆಗುತ್ತಿರುವ ಹಲ್ಲೆ ತಡೆಯಬೇಕು ಮತ್ತು ಹಲ್ಲೆಕೋರರನ್ನ ಬಂಧಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಬಾರ ಅಸೋಶಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು

ವಿಜಯಪುರದ ನ್ಯಾಯವಾದಿ ಚಾಂದ ಕೋಟೆ ಮತ್ತು ಬೆಳಗಾವಿ ಜಿಲ್ಲೆಯ ನ್ಯಾಯವಾದಿ ಎಸ್.ಬಿ.ಹೊಟ್ಟಿ ಮೇಲೆ ಹಲ್ಲೆಗಳಾಗಿದ್ದು, ಕೂಡಲೆ ಹಲ್ಲೆಕೋರರನ್ನು ಬಂಧಿಸಿ ಕಾನೂನುನಡಿಯಲ್ಲಿ ಶಿಕ್ಷೆ ನೀಡಬೇಕು. ನ್ಯಾಯವಾದಿ ಮೇಲೆ ಹಲ್ಲೆಯಾಗದಂತೆ ಭದ್ರತೆಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  

ಬಾರ ಅಸೋಸಿಯೇಷನ್ ಅಧ್ಯಕ್ಷ ಏ.ಜಿ. ಮುಳವಾಡಮಠ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನ್ಯಾಯವಾದಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಹಲ್ಲೆಕೋರರನ್ನು ಬಂಧಿಸುವಂತೆ ಮತ್ತು ನ್ಯಾಯವಾದಿಗಳಿಗೆ ಭದ್ರತೆ ನೀಡುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ವಿಷಯದ ಕುರಿತು ಚರ್ಚಾಸಭೆಗೂ ನಮ್ಮನ್ನು ಅಹ್ವಾನಿಸಿಲ್ಲ. ಇನ್ನು ಮುಂದೆ ಯಾವುದಾದರು ಹಲ್ಲೆಗಳು ಜರುಗಿದರೆ ಅದಕ್ಕೆ ಜಿಲ್ಲಾಡಳಿತವೇ ಕಾರಣವಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments