Select Your Language

Notifications

webdunia
webdunia
webdunia
webdunia

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ: ತಮಟೆ ಚಳವಳಿ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ: ತಮಟೆ ಚಳವಳಿ
ತುಮಕೂರು , ಸೋಮವಾರ, 30 ಜುಲೈ 2018 (17:43 IST)
ದಲಿತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ತಮಟೆ ಚಳವಳಿ ನಡೆಸಲಾಯಿತು.

ದಲಿತ ಸಂಘರ್ಷ ಸಮಿತಿಯಿಂದ ತಮಟೆ ಚಳುವಳಿ ನಡೆಯಿತು. ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು. ನ್ಯಾ.ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯವನ್ನು ಪ್ರತಿಭಟನಾಕಾರರು ಮಾಡಿದರು. ಜಿಲ್ಲೆಯ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಮಟೆ ಬಾರಿಸುತ್ತ ಚಳುವಳಿಗಾರರು ಒತ್ತಾಯಿಸಿದರು.

ತಮಟೆ ಬಡಿದುಕೊಂಡುಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಬರಲಾಯಿತು. ಮಹಿಳೆಯರು ಸಹ ತಮಟೆ ಹಿಡಿದು ಚಳುವಳಿಯಲ್ಲಿ ಭಾಗಿಯಾಗಿದ್ದರು.



 

Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಂಡರ್ ಸ್ಪೋಟ; ಆಸ್ಪತ್ರೆ ಸೇರಿದ 6 ಜನ