Webdunia - Bharat's app for daily news and videos

Install App

ಮುರುಘಾ ಮಠದ ಕಾರ್ಯವೈಖರಿ ಬಗ್ಗೆ ವರದಿ

Webdunia
ಬುಧವಾರ, 16 ನವೆಂಬರ್ 2022 (16:48 IST)
ಮುರುಘಾ ಮಠದ ಶಿವಮೂರ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆ ಪೀಠದ ಕಾರ್ಯ ವೈಖರಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು 5 ಪುಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ''ಸರ್ಕಾರದ ಆದೇಶದಂತೆ ವಾಸ್ತವಾಂಶದ ವರದಿ ಸಲ್ಲಿಸಿದ್ದೇನೆ. ವರದಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಜರುಗಿಸಲಿದೆ,'' ಎಂದು ಅವರು ತಿಳಿಸಿದರು. ಶಿವಮೂರ್ತಿಯ ಬಂಧನದ ನಂತರ ನವೆಂಬರ್‌ 4ರಂದು ಮಠದ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರ ಸೂಚನೆ ನೀಡಿತ್ತು. ಇದೇ ವೇಳೆ, ''ಮಠದ ಎಲ್ಲ ಆಗು ಹೋಗುಗಳು ಸುಗಮವಾಗಿ ನಡೆಯುತ್ತಿರುವುದರಿಂದ ಸರ್ಕಾರ ಆಡಳಿತಾಧಿಕಾರಿ ನೇಮಿಸುವುದು ಅನಗತ್ಯ,'' ಎಂದು ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿ ಆಧರಿಸಿ ಮಠದ ಮುಂದಿನ ಕಾರ್ಯವೈಖರಿಗಳ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಲಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ