ಮಾಜಿ ಸಿಎಂ ಕ್ಷೇತ್ರದಲ್ಲಿ ಶಿಕ್ಷಕಿ, ಶಿಕ್ಷಕನಿಂದ ವರದಿಗಾರನ ಮೇಲೆ ಹಲ್ಲೆ!

Webdunia
ಗುರುವಾರ, 9 ಆಗಸ್ಟ್ 2018 (14:08 IST)
ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿ ವರದಿಗಾರನ ಮೇಲೆ ಸರಕಾರಿ ಶಾಲೆ ಶಿಕ್ಷಕಿ ಹಾಗೂ ಶಿಕ್ಷಕಿಯ ಬೆಂಬಲಿಗರಿಂದ ಹಲ್ಲೆ ನಡೆದಿದೆ. ವರದಿ ಮಾಡಲು ಹೋಗಿದ್ದ ಬಾಗಲಕೋಟೆ ಸುದ್ದಿ ವಾಹಿನಿ ವರದಿಗಾರ ಸುರೇಶ್ ಕಡ್ಲಿಮಟ್ಟಿ ಮೇಲೆ ಶಿಕ್ಷಕಿ ಹಾಗೂ ಶಿಕ್ಷಕಿಯ ಬೆಂಬಲಿಗರಿಂದ ಹಲ್ಲೆ ನಡೆದಿದೆ.

ಬ್ಯಾಗ್ ನಲ್ಲಿದ್ದ ಐದುನೂರು ರೂಪಾಯಿ ಕಾಣದ ಹಿನ್ನೆಲೆ ವಿದ್ಯಾರ್ಥಿಗಳನ್ನು ಶಿಕ್ಷಕ, ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದರು.  ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ರಾಘಾಪುರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಅಶ್ವಿನಿ ಅಂಗಡಿ‌ ಮತ್ತು  ಶಿಕ್ಷಕ ಚಂದ್ರು ದಾಸರ ಇಬ್ಬರೂ ಸೇರಿಕೊಂಡು ಐದನೇ ತರಗತಿಯ ಹತ್ತಕ್ಕೂ ಹೆಚ್ಚು ವಿಧ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಬೆನ್ನು , ತೊಡೆ, ಸೊಂಟದ ಭಾಗದಲ್ಲಿ ಬಾಸುಂಡೆಗಳು ಕಾಣಿಸಿಕೊಂಡಿವೆ. ವಿದ್ಯಾರ್ಥಿಗಳು ಹಣ ಕದ್ದಿದ್ದಾರೆ ಎಂದ ಆರೋಪಿಸಿ ಸಾಮೂಹಿಕವಾಗಿ ವಿದ್ಯಾರ್ಥಿಗಳಿಗೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಪೋಷಕರು ಶಿಕ್ಷಕ ಚಂದ್ರು ದಾಸರ ಮತ್ತು ಶಿಕ್ಷಕಿ ಅಶ್ವಿನಿ ಅಂಗಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಾಜಿಪಂಚಾಯಿತಿ ಮಾಡಿ ವಿಷಯ ಮುಂದುವರೆಸದೆ  ಮುಚ್ಚಿ ಹಾಕಲಾಗಿದೆ. ಘಟನೆ ಸಂಬಂಧ ವರದಿ ಮಾಡಲು ಹೋಗಿದ್ದ ವರದಿಗಾರನಿಗೆ ಶಿಕ್ಷಕಿ, ಶಿಕ್ಷಕ ಅವಾಜ್ ಹಾಕಿದ್ದಾರೆ.

ಅಲ್ಲದೇ ಹಲ್ಲೆ ಮಾಡಿದ್ದಾರೆ. ಮಾಜಿ ಸಿಎಮ್ ಸಿದ್ರಾಮಯ್ಯ ಅವರ ಕ್ಷೇತ್ರದಲ್ಲಿ ಶಿಕ್ಷಕಿಯೋರ್ವಳು ಈ ರೀತಿ ಗೂಂಡಾ ವರ್ತನೆ ತೋರಿಸ್ತಿದ್ದಾಳೆ ಅಂದ್ರೆ ಇಲ್ಲಿನ ಬಿಇಓ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಅಂತ ಪ್ರಶ್ನೆ ಮೂಡುತ್ತಿದೆ. ಇಷ್ಟೆಲ್ಲಾ ಘಟನೆ ನಡೆದರೂ ಅವರ ಮೇಲೆ ಯಾವುದೇ ಕ್ರಮಕ್ಕೆ‌ ಮುಂದಾಗ್ತಿಲ್ಲ ಅನ್ನೋದೆ ಹಲವು ಸಂಶಯಕ್ಕೆಡೆ ಮಾಡಿಕೊಟ್ಟಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments