Select Your Language

Notifications

webdunia
webdunia
webdunia
webdunia

72ನೇ ಗಣರಾಜ್ಯೋತ್ಸವ ; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

72ನೇ ಗಣರಾಜ್ಯೋತ್ಸವ ; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು , ಮಂಗಳವಾರ, 26 ಜನವರಿ 2021 (10:09 IST)
ಬೆಂಗಳೂರು : ಇಂದು 72 ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ  ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗಿದೆ.

ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗಿದೆ. ಧ್ವಜಾರೋಹಣದ ಬಳಿಕ ವಿ.ಆರ್ ವಾಲಾರು ಜನರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ವರ್ಷ ಸಾಕಷ್ಟು ಸವಾಲಿನ ಮಧ್ಯೆ ಕೆಲಸ ಮಾಡಬೇಕಿದೆ. ರಾಜ್ಯ ಸರ್ಕಾರ  ಕೊವಿಡ್ ನಿಯಂತ್ರಣಕ್ಕಾಗಿ ಕೆಲಸ ಮಾಡ್ತಿದೆ.

ಹಾಗೇ ಪ್ರಧಾನಿ ಮೋದಿಯವರ ದೂರದೃಷ್ಟಿಯಿಂದ ಆತ್ಮನಿರ್ಭರ ಭಾರತ ನಿರ್ಮಾಣವಾಗಿದೆ.  ವಿಶ್ವದಲ್ಲೇ ಅತಿ ದೊಡ್ಡ ಲಸಿಕೆ ಅಭಿಯಾನ ಭಾರತದಲ್ಲಿ ಆಗಿದೆ. ಈ ಲಸಿಕಾ ಅಭಿಯಾನಕ್ಕೆ ನಾವು ಕೂಡ ಕೈಜೋಡಿಸಿದ್ದೇವೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಟ್ಟಿನ ಗಿರಣಿಯಲ್ಲಿ ಸಿಲುಕಿದ ಮಹಿಳೆಯ ತಲೆಕೂದಲು: ಮುಂದೆ ಆಗಿದ್ದು ಭೀಕರ ದುರಂತ!