Webdunia - Bharat's app for daily news and videos

Install App

ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ?

Webdunia
ಶನಿವಾರ, 12 ಫೆಬ್ರವರಿ 2022 (14:50 IST)
ಬೆಂಗಳೂರು : 2022ರ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ,


ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್.ಸಿ. ವೇಣುಗೋಪಾಲ್ ನೇತೃತ್ವದ ತಂಡ ಭೇಟಿ ನೀಡಿ ಮನವಿ ಸಲ್ಲಿಸಿದೆ.

2022ರ ಸಾಲಿನ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ. ಅನುದಾನ ನೀಡಬೇಕು ಎಂದು ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ. 

ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ ಸಿಎಂ ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎಮ್. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments