ಧ್ವನಿವರ್ಧಕಕ್ಕೆ ಅನುಮತಿ ನೀಡುವಂತೆ ಮನವಿ

Webdunia
ಬುಧವಾರ, 8 ಮಾರ್ಚ್ 2023 (13:16 IST)
ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಸಂಬಂಧ ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದೇ ತಿಂಗಳು ಮಾರ್ಚ್​ 22 ರಿಂದ ರಂಜಾನ್​ ಪ್ರಾರಂಭವಾಗುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮಸೀದಿಗಳಲ್ಲಿ ನಸುಕಿನ ಜಾವ 5 ರಿಂದ 5:30 ವರೆಗು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ನೀಡಬೇಕೆಂದು ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮತ್ತು ಶಾಸಕ ಸಿ.ಟಿ ರವಿಯವರಿಗೆ ಮನವಿ ಮಾಡಿದ್ದಾರೆ. ಮುಸಲ್ಮಾನ್ ಬಾಂಧವರಿಗೆ ರಂಜಾನ್ ಮಾಸವು ಬಹಳ ಪವಿತ್ರ ಮಾಸವಾಗಿರುತ್ತದೆ. ಶಾಂತಿ, ಸಹಬಾಳ್ವೆ, ದಾನ ಧರ್ಮ ಉಪವಾಸದೊಂದಿಗೆ ಕಟ್ಟುನಿಟ್ಟಾಗಿ ಪ್ರಾರ್ಥನೆಗಳು ರಂಜಾನ್ ಮಾಸದಲ್ಲಿ ನಡೆಯುತ್ತವೆ, ಇದರ ಜೊತೆಗೆ ಮುಸಲ್ಮಾನ್ ಬಾಂಧವರಿಗೆ ಆಝಾನ್ ಕೂಡ ರಂಜಾನ್ ಆಚರಣೆಯ ಒಂದು ಭಾಗವಾಗಿರುತ್ತದೆ. ವಿಶೇಷ ಸಂದರ್ಭಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ, ಕ್ರೀಡಾಕೂಟಗಳಿಗೆ ರಾತ್ರಿ ಹಾಗೂ ಮುಂಜಾನೆ ಧ್ವನಿ ವರ್ಧಕವನ್ನು ಬಳಸಲು ಅನುಮತಿ ನೀಡುತ್ತಿದ್ದೀರಿ, ಇದೇ ರೀತಿ ಮುಸಲ್ಮಾನರ ಪವಿತ್ರ ರಂಜಾನ್ ಮಾಸದಲ್ಲಿ ಬೆಳಗಿನ ಜಾವ 5-00 ರಿಂದ 5-30 ರ ಒಳಗೆ ಗರಿಷ್ಠ 5 ನಿಮಿಷಗಳ ಕಾಲ ಧ್ವನಿವರ್ಧಕದ ಮೂಲಕ ಆಝಾನ್‌ ನೀಡಲು ಅನುಮತಿ ನೀಡಬೇಕೆಂದು ಕೋರಿಕೊಳ್ಳುತ್ತೇವೆ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments