Webdunia - Bharat's app for daily news and videos

Install App

ಧ್ವನಿವರ್ಧಕಕ್ಕೆ ಅನುಮತಿ ನೀಡುವಂತೆ ಮನವಿ

Webdunia
ಬುಧವಾರ, 8 ಮಾರ್ಚ್ 2023 (13:16 IST)
ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಸಂಬಂಧ ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದೇ ತಿಂಗಳು ಮಾರ್ಚ್​ 22 ರಿಂದ ರಂಜಾನ್​ ಪ್ರಾರಂಭವಾಗುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮಸೀದಿಗಳಲ್ಲಿ ನಸುಕಿನ ಜಾವ 5 ರಿಂದ 5:30 ವರೆಗು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ನೀಡಬೇಕೆಂದು ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮತ್ತು ಶಾಸಕ ಸಿ.ಟಿ ರವಿಯವರಿಗೆ ಮನವಿ ಮಾಡಿದ್ದಾರೆ. ಮುಸಲ್ಮಾನ್ ಬಾಂಧವರಿಗೆ ರಂಜಾನ್ ಮಾಸವು ಬಹಳ ಪವಿತ್ರ ಮಾಸವಾಗಿರುತ್ತದೆ. ಶಾಂತಿ, ಸಹಬಾಳ್ವೆ, ದಾನ ಧರ್ಮ ಉಪವಾಸದೊಂದಿಗೆ ಕಟ್ಟುನಿಟ್ಟಾಗಿ ಪ್ರಾರ್ಥನೆಗಳು ರಂಜಾನ್ ಮಾಸದಲ್ಲಿ ನಡೆಯುತ್ತವೆ, ಇದರ ಜೊತೆಗೆ ಮುಸಲ್ಮಾನ್ ಬಾಂಧವರಿಗೆ ಆಝಾನ್ ಕೂಡ ರಂಜಾನ್ ಆಚರಣೆಯ ಒಂದು ಭಾಗವಾಗಿರುತ್ತದೆ. ವಿಶೇಷ ಸಂದರ್ಭಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ, ಕ್ರೀಡಾಕೂಟಗಳಿಗೆ ರಾತ್ರಿ ಹಾಗೂ ಮುಂಜಾನೆ ಧ್ವನಿ ವರ್ಧಕವನ್ನು ಬಳಸಲು ಅನುಮತಿ ನೀಡುತ್ತಿದ್ದೀರಿ, ಇದೇ ರೀತಿ ಮುಸಲ್ಮಾನರ ಪವಿತ್ರ ರಂಜಾನ್ ಮಾಸದಲ್ಲಿ ಬೆಳಗಿನ ಜಾವ 5-00 ರಿಂದ 5-30 ರ ಒಳಗೆ ಗರಿಷ್ಠ 5 ನಿಮಿಷಗಳ ಕಾಲ ಧ್ವನಿವರ್ಧಕದ ಮೂಲಕ ಆಝಾನ್‌ ನೀಡಲು ಅನುಮತಿ ನೀಡಬೇಕೆಂದು ಕೋರಿಕೊಳ್ಳುತ್ತೇವೆ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments