Select Your Language

Notifications

webdunia
webdunia
webdunia
webdunia

UP ಮಾದರಿ ಜಾರಿಗೆಗೆ ಆಗ್ರಹ

UP ಮಾದರಿ ಜಾರಿಗೆಗೆ ಆಗ್ರಹ
bangalore , ಗುರುವಾರ, 21 ಏಪ್ರಿಲ್ 2022 (18:49 IST)
ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಗಳ ಹಿನ್ನೆಲೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ ಆಸ್ತಿ-ಪಾಸ್ತಿ ಹಾಳು ಮಾಡುವಂತವರ ವಿರುದ್ಧ ಯುಪಿ ಅಸ್ತ್ರ ಬಳಸಬೇಕು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೈಗೊಂಡ ಕ್ರಮಕ್ಕೆ ಆ ರಾಜ್ಯದಲ್ಲಿ ಜನ ಜೈ, ಜೈ ಎನ್ನುತ್ತಿದ್ದಾರೆ. ಅದೇ ಮಾದರಿ ರಾಜ್ಯದಲ್ಲಿ ಜಾರಿಗೆ ಬರಲಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ಸಂಘಟನೆಗಳಿಗೆ ಬುಲ್ಡೋಜರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನತೆಯ ಪರವಾಗಿ ವಿನಂತಿಸಿಕೊಳ್ಳುತ್ತೇವೆ ಎಂದಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಅಲ್ಪಸಂಖ್ಯಾತರ ಪರ ಆನಂದ್ ಸಿಂಗ್​ ಮಾತು