Webdunia - Bharat's app for daily news and videos

Install App

ಸ್ಥಳೀಯರಿಗೆ BJP ಟಿಕೆಟ್​ ನೀಡುವಂತೆ ಮನವಿ

Webdunia
ಮಂಗಳವಾರ, 21 ಮಾರ್ಚ್ 2023 (18:22 IST)
ತಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ.. ನಾವೆಲ್ಲರೂ ಒಂದೇ ಎಂದು ಹೇಳಿಕೊಂಡು ಓಡಾಡುವ ರಾಜಕೀಯ ಪಕ್ಷದ ನಾಯಕರು ಚುನಾವಣೆ ಹತ್ತಿರ ಬಂದಾಗ ನನಗೆ ಟಿಕೆಟ್​​​, ನನಗೆ ಟಿಕೆಟ್​​ ಎಂದು ಸ್ವಪಕ್ಷದಲ್ಲೇ ಕಚ್ಚಾಡಿಕೊಳ್ತಾರೆ. ಇದೀಗ ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದಲ್ಲಿ ಸ್ಥಳೀಯ BJP ಮುಖಂಡರು ಸ್ಥಳೀಯರಿಗೆ BJP ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಹಾಲಿ BJP ಶಾಸಕ ಸಿದ್ದು ಸವದಿ ವಿರುದ್ದ ತೇರದಾಳ ಸ್ಥಳೀಯ BJP ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ..ತೇರದಾಳ ಮತಕ್ಷೇತ್ರದ ಅಸಮಾಧಾನಿತ BJP ಮುಖಂಡ, ಟಿಕೆಟ್ ಆಕಾಂಕ್ಷಿ ಕಿರಣ್ ಕುಮಾರ್ ವರಿಷ್ಠರ ಮುಂದೆ ಸ್ಥಳೀಯರಿಗೆ ಟಿಕೆಟ್​ ನೀಡಬೇಕೆಂದು ಮನವಿ ಮಾಡಿದ್ದಾರೆ.. ಕಳೆದೆರಡು ವಿಧಾನಸಭಾ ಚುನಾವಣೆಗಳಿಂದಲೂ ಪಕ್ಷದ ವರಿಷ್ಠರ ಮುಂದೆ ಸ್ಥಳೀಯರು ಈ ಬೇಡಿಕೆ ಇಟ್ಟುಕೊಂಡೇ ಬಂದಿದ್ದಾರೆ.. ಮತಕ್ಷೇತ್ರದ ಸ್ಥಳೀಯ BJP ನಾಯಕರೆಲ್ಲ ಒಗ್ಗಟ್ಟಿನಿಂದ ಚುನಾವಣೆ ಮಾಡ್ತೇವೆ ಎಂದು ಅಸಮಾಧಾನಿತ BJP ಮುಖಂಡರು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments