ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ : ಬೊಮ್ಮಾಯಿ

Webdunia
ಬುಧವಾರ, 12 ಜುಲೈ 2023 (12:18 IST)
ಬೆಂಗಳೂರು : ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಇಷ್ಟೆಲ್ಲಾ ನಡೆದರೂ ರಾಜ್ಯ ಸರ್ಕಾರ ಇದನ್ನು ಹಗುರವಾಗಿ ತೆಗೆದುಕೊಂಡಿದೆ. ಸಾರ್ವಜನಿಕರ ವಲಯದಲ್ಲಿ ಈ ಪ್ರಕರಣ ಸಿಬಿಐಗೆ ಕೊಡಬೇಕೆಂಬ ಆಗ್ರಹ ಇದೆ. ನಾವು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಗ್ರಹಿಸಿದ್ದೇವೆ ಎಂದರು.

ಟಿ ನರಸೀಪುರದಲ್ಲಿಯೂ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಕಲೇಶಪುರದಲ್ಲೂ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಕ್ರಮ ಮರಳು ದಂಧೆ ಮಾಡುವುದನ್ನು ತಡೆಯಲು ತೆರಳಿದವನ ಕೊಲೆ ಮಾಡುತ್ತಾರೆ. ಹಫ್ತಾ ವಸೂಲಿಗೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ.

ಈ ಸರ್ಕಾರದಲ್ಲಿ ಸಮಾಜಘಾತುಕರಿಗೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂಬ ಧೈರ್ಯ ಬಂದಿದೆ. ಈ ಸರ್ಕಾರ ಒಂದೂವರೆ ತಿಂಗಳಲ್ಲಿ ಕಾನೂನು ಸುವ್ಯವಸ್ಥೆ ಇಷ್ಟೊಂದು ಹದಗೆಟ್ಟಿದೆ. ಇವರು ಐದು ದೋಖಾಗಳ ನಡುವೆ ಕಾನೂನು ಸುವ್ಯವಸ್ಥೆ ದೋಖಾ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments