Webdunia - Bharat's app for daily news and videos

Install App

ಖಾಸಗಿ ಕ್ಷೇತ್ರದಲ್ಲೂ ಇನ್ಮುಂದೆ ಕನ್ನಡಿಗರಿಗೆ ಫುಲ್ ಮೀಸಲಾತಿ

Krishnaveni K
ಶನಿವಾರ, 15 ಜೂನ್ 2024 (09:59 IST)
Photo Credit: Facebook
ಬೆಂಗಳೂರು: ಖಾಸಗಿ ವಲಯದ ಸಿ ಮತ್ತು ಡಿ ವೃಂದದ ಉದ್ಯೋಗದಲ್ಲಿ ಇನ್ನು ಮುಂದೆ ಕನ್ನಡಿಗರಿಗೆ ಸಂಪೂರ್ಣ ಮೀಸಲಾತಿ ಒದಗಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ.

ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ಮತ್ತು ವಿಕಲಾಂಗರಿಗೆ ಶೇ. 5 ರಷ್ಟು ಮೀಸಲಾತಿ ನೀಡಲು ಕಾರ್ಮಿಕ ಇಲಾಖೆ ಮುಮದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮ-2024 ರನ್ನು ರೂಪಿಸುವ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.

ಇದು ಕನ್ನಡಿಗರ ಪಾಲಿಗೆ ಖುಷಿಯ ಸುದ್ದಿಯೇ ಸರಿ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಇದಕ್ಕೆ ಪ್ರಯತ್ನ ನಡೆದಿತ್ತು. ಆದರೆ ಅದು ಸಫಲವಾಗಲಿಲ್ಲ. ಆದರೆ ಈ ಬಾರಿ ಸಚಿವ ಸಂತೋಷ್ ಲಾಡ್ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡಲಿದ್ದಾರೆ. ರಾಜ್ಯದಲ್ಲಿರುವ ಕೈಗಾರಿಕೆಗಳು ಇಲ್ಲಿನ ಭೂಮಿ, ತೆರಿಗೆ, ವಿದ್ಯುತ್ ಎಂದು ಲಾಭ ಪಡೆದುಕೊಳ್ಳುತ್ತಿವೆ. ಹೀಗಾಗಿ ಇಲ್ಲಿ ಕೈಗಾರಿಕೆ ನಡೆಸುತ್ತಿರುವವರು ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಈ ಕಾಯಿದೆ ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments