ಶೇ.100 ಕನ್ನಡಿಗರಿಗೆ ಮೀಸಲಾತಿ ಎಂದರೆ ನಾವೇನು ಮಾಡಬೇಕು: ಪರಭಾಷಿಕರ ಆಕ್ರೋಶ

Krishnaveni K
ಬುಧವಾರ, 17 ಜುಲೈ 2024 (14:45 IST)
Photo Credit: Facebook
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎನ್ನುವ ಸರ್ಕಾರದ ನಿಯಮದ ವಿರುದ್ಧ ಈಗ ಪರಭಾಷಿಕರಿಂದ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ.

ಸಿದ್ದರಾಮಯ್ಯ ಸರ್ಕಾರದ ಈ ನಿರ್ಧರ ತಲೆ-ಬುಡವಿಲ್ಲದ ನಿರ್ಧಾರ. ಕರ್ನಾಟಕದ ಆರ್ಥಿಕತೆ ಬೆಳೆಸಲು ಕೇವಲ ಕನ್ನಡಿಗರು ಮಾತ್ರವಲ್ಲ, ಹೊರ ರಾಜ್ಯದವರ ಕೊಡುಗೆಯೂ ಇದೆ ಎಂದು ಪರಭಾಷಿಕರು ತಕರಾರು ತೆಗೆದಿದ್ದಾರೆ. ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ಎಂದರೆ ಇಲ್ಲಿಗೆ ಉದ್ಯೋಗ ಅರಸಿಕೊಂಡು ಬರುವ ಬೇರೆ ರಾಜ್ಯದವರು ಏನು ಮಾಡಬೇಕು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಉದ್ಯೋಗ ಎನ್ನುವುದು ಭಾಷೆಗೆ ಸಂಬಂಧಿಸಿದ್ದಲ್ಲ, ಕೌಶಲ್ಯತೆಗೆ ಸಂಬಂಧಿಸಿದ್ದು. ಹೊರ ರಾಜ್ಯದಲ್ಲಿ ನಿಪುಣರಿದ್ದರೆ ಅವರಿಗೆ ಅವರ ರಾಜ್ಯದಲ್ಲಿ ಅವಕಾಶವಿಲ್ಲದೇ ಇದ್ದಾಗ ಇಲ್ಲಿಗೆ ಬರುವುದು ಸಹಜವಲ್ಲವೇ? ಹಾಗಿದ್ದರೆ ನಾವೆಲ್ಲಾ ಒಂದು ದಿನ ಇದ್ದಕ್ಕಿದ್ದ ಹಾಗೆ ಹೊರಟು ಹೋದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಏನಾಗಬಹುದು ಎಂದು ಯೋಚಿಸಿದ್ದಾರಾ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ರಾಜಧಾನಿ ಬೆಂಗಳೂರು ಐಟಿ ಸಿಟಿ ಎಂದು ಹೆಸರು ಮಾಡಿದೆ. ಇಲ್ಲಿ ಸಾವಿರಾರು ಮಂದಿ ಹೊರರಾಜ್ಯದವರು ಕೆಲಸ ಮಾಡುತ್ತಿದ್ದಾರೆ. ಅವರಿಗೆಲ್ಲಾ ಈಗ ಆತಂಕವಾಗಲ್ವಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಕನ್ನಡಿಗರು ಇನ್ನು ಮುಂದೆ ಭಾರತದ ನೋಟುಗಳನ್ನೂ ತೆಗೆದುಕೊಳ್ಳಬಾರದು. ಯಾಕೆಂದರೆ ಅದರಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ಮತ್ತೆ ಕೆಲವರು ಇದೆಲ್ಲಾ ವಾಲ್ಮೀಕಿ ನಿಗಮ, ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಮಾಡಿದ ತಂತ್ರ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments