Select Your Language

Notifications

webdunia
webdunia
webdunia
webdunia

ಮೂವರು ವಿದ್ಯಾರ್ಥಿಗಳ ಸಾವು, ಘೋರ ದುರಂತ: ಸಚಿವ ಜಯಚಂದ್ರ

ಮೂವರು ವಿದ್ಯಾರ್ಥಿಗಳ ಸಾವು, ಘೋರ ದುರಂತ: ಸಚಿವ ಜಯಚಂದ್ರ
ತುಮಕೂರು , ಗುರುವಾರ, 9 ಮಾರ್ಚ್ 2017 (13:52 IST)
ಮೂವರು ವಿದ್ಯಾರ್ಥಿಗಳ ಸಾವು ಪ್ರಕರಣ ಘೋರ ದುರಂತವಾಗಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ವಿದ್ಯಾರ್ಥಿ ವಸತಿ ನಿಲಯದದಲ್ಲಿ ಯಾರೋ ಆಹಾರಕ್ಕೆ ವಿಷ ಬೆರೆಸಿರುವ ಶಂಕೆಯಿದೆ. ಇದೊಂದು ಘೋರ ದುರಂತ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಮೃತ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನನ್ನ ರಕ್ತ ಸಂಬಂಧಿಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂಥ್ ಪ್ರಕರಣದ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ