Webdunia - Bharat's app for daily news and videos

Install App

ಯಾವ ತಪ್ಪಿಗಾಗಿ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 5 ಅಕ್ಟೋಬರ್ 2024 (18:37 IST)
Photo Courtesy X
ರಾಯಚೂರು: ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡಿ, ರಾಜಕೀಯ ದುರುದ್ದೇಶದಿಂದ ನನ್ನ ರಾಜೀನಾಮೆ ಕೇಳುತ್ತಿದೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಿರುವಾಗ ನಾನೇಕೆ ರಾಜೀನಾಮೆ ನೀಡಲಿ. ಸುಳ್ಳು ಆರೋಪಗಳಿಗೆ ಉತ್ತರ ನೀಡುತ್ತೇವೆ ಎಂದರು.

ಇನ್ನು ಮುಡಾ ನಿವೇಶನ ಹಂಚಿಕೆ ಪ್ರಕರಣ ಬೆಳಕಿಗೆ ಬಂದ ನಂತರ ದಲಿತ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಕಾಂಗ್ರೆಸ್‌ ಹೈಕಮಾಂಡ್ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನರು ಅನಗತ್ಯವಾಗಿ ಊಹಾಪೋಹ ಸೃಷ್ಟಿಸುತ್ತಿದ್ದಾರೆ.ಈ ಹಿಂದೆಯೂ ಈ ರೀತಿಯ ಭೇಟಿಯಾಗಿದೆ. ಊಹಾಪೋಹ ಸೃಷ್ಟಿಸುವ ಅಗತ್ಯವೇನಿದೆ ಎಂದರು.

ಮೈಸೂರಿನಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಜೆಡಿಎಸ್‌ ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸತ್ಯವನ್ನು ಮಾತನಾಡಿದ್ದಾರೆ.

ಜಿ ಟಿ ದೇವೇಗೌಡ ಅವರು ಜೆಡಿಎಸ್‌ನ ಕೋರ್ ಕಮಿಟಿ ಅಧ್ಯಕ್ಷರು ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸದಸ್ಯರಲ್ಲಿ ಒಬ್ಬರು. ಅವರು ಸತ್ಯವನ್ನು ಮಾತ್ರ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದರು.

ನನ್ನ ರಾಜೀನಾಮೆ ಕೇಳುತ್ತಿರುವ ಆರ್ ಅಶೋಕ್ ಅವರು ಮೊದಲು ರಾಜೀನಾಮೆ ನೀಡಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments