ರಾಜೀನಾಮೆ ನೀಡುತ್ತಿರೋ ಅಥವಾ ಅರವಿಂದ ಕೇಜ್ರಿವಾಲ್ ಹಾದಿ ಹಿಡಿಯುತ್ತೀರೋ: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ

Sampriya
ಶನಿವಾರ, 17 ಆಗಸ್ಟ್ 2024 (19:43 IST)
Photo Courtesy X
ಮೈಸೂರು: ಬಿಜೆಪಿ ನಾಯಕರಾದ ಎಲ್‌ ಕೆ ಅಡ್ವಾಣಿ, ಯಡಿಯೂರಪ್ಪ ಅವರನ್ನು ಅನುಕರಣೆ ಮಾಡಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತುರೋ ಅಥವಾ ಅರವಿಂದ ಕೇಜ್ರಿವಾಲ್ ಹಾದಿ ಹಿಡಿಯುತ್ತೀರೋ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಜಾರಿ ಮಾಡಿದ ಪ್ಯಾಸಿಕ್ಯೂಷನ್ ಅನುಮತಿ ಬಗ್ಗೆ ಪ್ರತಿಕ್ರಿಯಿಸಿದರು.   ಅಕ್ರಮವಾಗಿ‌ ಮುಡಾದಿಂದ ಪತ್ನಿ ಹೆಸರಲ್ಲಿ ಪಡೆದಿರುವ 14 ಸೈಟುಗಳು ವಿರುದ್ಧ ತನಿಖೆಯಾಗಬೇಕೆಂದು ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾನು ರಾಜ್ಯಪಾಲರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ ಅವರು, ಸಿದ್ದರಾಮಯ್ಯ ಸರ್, ಅಡ್ವಾಣಿ, ಯಡಿಯೂರಪ್ಪ  ಸಾಹೇಬರನ್ನು ಅನುಕರಣೆ ಮಾಡಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿರೋ ಅಥವಾ ಅರವಿಂದ ಕೇಜ್ರಿವಾಲ್ ಹಾದಿ ಹಿಡಿಯುತ್ತೀರೋ? ಹಾಗೂ ಹೊಂದಾಣಿಕೆ ರಾಜಕಾರಣ ಕೊನೆಯಾಗಲು ಈ ಘಟನೆ ಒಂದು ಮೇಲ್ಪಂಕ್ತಿಯಾದೀತೇ?

ಸಿದ್ದರಾಮಯ್ಯ ಅವರಿಗೆ ತಿಂಗಳ ಹಿಂದೆಯೇ ನಾನು ಸ್ಪಷ್ಟವಾಗಿ ಹೇಳಿದ್ದೆ ಸೈಟ್‌ಗಳನ್ನು ಸರೆಂಡರ್ ಮಾಡಿ, ತನಿಖೆಗೆ ಆದೇಶಿಸಿ, ಒಬ್ಬರು ಸಿಟ್ಟಿಂಗ್ ಜಡ್ಜ್ ಅಥವಾ ಸಂತೋಷ್ ಹೆಗ್ಡೆ , ಎನ್ ಕುಮಾರ್ ಅವರಂತಹ ಕ್ಯಾಲಿಬರ್ ಇರುವ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ , ಎಲ್ಲಾ ಕಳ್ಳರು ಸಿಕ್ಕಿ ಹಾಕಿಕೊಳ್ತಾರೆ ಎಂದು ಹೇಳಿದ್ದೆ ಎಂದು ಹೇಳಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments