Webdunia - Bharat's app for daily news and videos

Install App

ಕೃಷಿ ಕಾಯ್ದೆ ವಿರೋಧಿಸಿ ನಡೆಸಲಾದ ಭಾರತ್ ಬಂದ್ ಗೆ ಮಹಾನಗರದಲ್ಲಿ ನಿರಸ ಪ್ರತಿಕ್ರಿಯೆ

Webdunia
ಸೋಮವಾರ, 27 ಸೆಪ್ಟಂಬರ್ 2021 (22:17 IST)
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ನಡೆಸಲಾದ ಭಾರತ್ ಬಂದ್ ಗೆ ಮಹಾನಗರದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರೈತ ಸಂಘಟನೆ ಕಾರ್ಯಕರ್ತರು, ಕಾರ್ಮಿಕ, ವಕೀಲರ, ಕನ್ನಡಪರ ಸಂಘಟನೆಯ ನೂರಾರು ಕಾರ್ಯಕರ್ತರು ಸೋಮವಾರ ಪುರಭವನದಿಂದ ಮೈಸೂರು ಬ್ಯಾಂಕ್ ಸರ್ಕಲ್​ವರೆಗೆ ಬೃಹತ್ ರ‍್ಯಾಲಿ, ತಮಟೆ ಚಳವಳಿ ನಡೆಸಿದರು. ಭಗತ್​ ಸಿಂಗ್​ ಅವರ 114ನೇ ಜನ್ಮದಿನವಾಗಿದ್ದು, ಪ್ರತಿಭಟನೆಯಲ್ಲಿ ಭಗತ್​ ಸಿಂಗ್​ ಪೋಸ್ಟರ್​ಗಳು ರಾರಾಜಿಸಿದವು.
ಕಾರ್ಪೊರೇಟ್ ಏಜೆಂಟ್ ಮೋದಿ, ರೈತ ವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ತರಕಾರಿ ಮಾಲೆ ಹಾಕಿ ರೈತರನ್ನು ಉಳಿಸಿ ಎಂದು ಆಗ್ರಹಿಸಿದರು. 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ನೀಡಲಾಗಿತ್ತು.
ರೈತ ಸಂಘಟನೆಗಳಲ್ಲಿ ಯಾವುದೇ ಒಡಕಿಲ್ಲ: ರೈತ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ರೈತ ಸಂಘಟನೆಗಳಲ್ಲಿ ಯಾವುದೇ ಒಡಕಿಲ್ಲ .ಹಳ್ಳಿ ಹಳ್ಳಿಗಳಲ್ಲೂ ಬಂದ್​ಗೆ ಬೆಂಬಲ ಸಿಕ್ಕಿದೆ . ಸೋಮವಾರವಾದರೂ ಎಲ್ಲ ರಸ್ತೆ ಖಾಲಿ ಖಾಲಿ ಇದೆ. ರಾಜ್ಯ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೆಲವೊಂದು ಸಂಘ ಸಂಸ್ಥೆಗಳನ್ನ ಕರೆಸಿ ಬೆಂಬಲ ನೀಡಬೇಡಿ ಅಂತ ಹೇಳಿದೆ. ನಮ್ಮ ಪ್ರತಿಭಟನೆಗೆ ನವೆಂಬರ್ 26ಕ್ಕೆ ಒಂದು ವರ್ಷ ಆಗಲಿದ್ದು, ಅಂದು ನಾವು 5 ಕೋಟಿ ಜನರು ಸೇರಿಕೊಂಡು ದೆಹಲಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಗೆ ಪೊಲೀಸರ ಅಡ್ಡಿ:  ಚಂದ್ರಶೇಖರ್ ಮಾತನಾಡಿ, ಜನಸಾಮಾನ್ಯರಿಂದ ಬಂದ್​ಗೆ ಬೆಂಬಲ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಕೇಳಿಸಿಕೊಳ್ಳಬೇಕು. ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ದೇಶಾದ್ಯಂತ ಚಳವಳಿ ನಡೆಯುತ್ತಿದೆ, ಜನರಿಂದ ವ್ಯಾಪಕ ಪ್ರತಿಕ್ರಿಯೆ ಸಿಕ್ಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments