Webdunia - Bharat's app for daily news and videos

Install App

ಸಿದ್ದರಾಮಯ್ಯ ಅವರು ಈಗಲೇ ರಾಜೀನಾಮೆ ನೀಡಿದ್ರೆ ಗೌರವಯುತ: ಬಿಎಸ್‌ ಯಡಿಯೂರಪ್ಪ

Sampriya
ಬುಧವಾರ, 4 ಸೆಪ್ಟಂಬರ್ 2024 (19:00 IST)
ಶಿವಮೊಗ್ಗ: ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ನ್ಯಾಯಾಲಯದ ತೀರ್ಪಿನ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ಈಗಲೇ ಗೌರವಯುತವಾಗಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದರು.  ಎಂದು ಭವಿಷ್ಯ ನುಡಿದರು.

ಈ ಸಂಬಂಧ ಇನ್ನು ಹೋರಾಟದ ಅಗತ್ಯವಿಲ್ಲ. ಅವರು ಮಾಡಿರುವ ಹಗರಣಗಳೆಲ್ಲವೂ ಸಾಬೀತಾಗಿದೆ. ಒಂದು ರೀತಿಯಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದಿದ್ದು, ಸಹಜವಾಗಿಯೇ ಅವರು(ಸಿಎಂ) ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದರು.

ಇನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದರಿಂದ ಸಿದ್ದರಾಮಯ್ಯಗೆ ಸದ್ಯ ರಿಲೀಫ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments