Webdunia - Bharat's app for daily news and videos

Install App

ಮಾತೃಭಾಷೆಯನ್ನು ಗೌರವಿಸುವುದು ತಾಯಿಯನ್ನು ಗೌರವಿಸಿದಂತೆ

Webdunia
ಗುರುವಾರ, 28 ಅಕ್ಟೋಬರ್ 2021 (21:01 IST)
ಬೆಂಗಳೂರು: ಮಾತೃಭಾಷೆಯನ್ನು ಗೌರವಿಸುವುದು ತಾಯಿಯನ್ನು ಗೌರವಿಸಿದಂತೆ. ಮಾತೃ ಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸೋಣ. ನಮ್ಮ ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸೋಣ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ. ಕೆ ಆರ್ ವೇಣುಗೋಪಾಲ್ ಹೇಳಿದರು. 
 
"ಕನ್ನಡಕ್ಕಾಗಿ ನಾವು" ಅಭಿಯಾನದ ಅಂಗವಾಗಿ ಗುರುವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವ ವಿದ್ಯಾಲಯದ ಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿ ಕನ್ನಡ ನಾಡಿನನಲ್ಲಿ ಕನ್ನಡಿಗನಾಗಿ ಹುಟ್ಟಿ, ಇಲ್ಲಿ ವಾಸಿಸುತ್ತಿರುವ ನಾವು ಕನ್ನಡ ನಾಡು ನುಡಿ ರಕ್ಷಣೆಗೆ ಪಣ ತೊಡಬೇಕಿದೆ. ಈಗಾಗಲೇ ಸರ್ಕಾರದ ಆದೇಶದಂತೆ ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತದಲ್ಲಿ ಕನ್ನಡ ಕಡ್ಡಾಯ ಮಾಡಿದ್ದು, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನು ಬಳಲಾಸುತ್ತಿದೆ. ಇದು ಮುಂದುವರಿಯಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.
 
ನಾವು ಕನ್ನಡ ಉಳಿಸಿ ಬೆಳೆಸುವ ಜೊತೆಗೆ ಕರ್ನಾಟಕದಲ್ಲಿ ವಾಸವಾಗಿರುವ ಬೇರೆ ರಾಜ್ಯದ ಜನರಿಗೂ ಕನ್ನಡ ಕಲಿಸುವ ಮೂಲಕ ನಮ್ಮ ಭಾಷೆಯ ರಕ್ಷಣೆಗೆ ಮುಂದಾಗಬೇಕಿದೆ. ಆ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವ ಬದ್ಧತೆಯನ್ನು ನಾವು ಮೆರೆಯಬೇಕಿದೆ ಎಂದು ಹೇಳಿದರು.   
 
ಭಾಷಣದ ನಂತರ ಕುಲಪತಿಗಳು ನೆರೆದವರಿಗೆ ಸಂಕಲ್ಪ ಬೋಧಿಸಿದರು. ಕಾರ್ಯಕ್ರಮದಲ್ಲಿ ಸರಕಾರ ನಿರ್ದೇಶಿಸಿದ ಮೂರು ಕನ್ನಡ ಗೀತೆಗಳನ್ನು ಪ್ರದರ್ಶನ ಕಲಾ ವಿಭಾಗದ ವಿದ್ಯಾರ್ಥಿಗಳು ಹಾಡಿದರು.
 
ಕಾರ್ಯಕ್ರಮದಲ್ಲಿ ಕುಲಸಚಿವರು (ಮೌಲ್ಯಮಾಪನ), ಪ್ರೊ. ಜೆ. ಟಿ  ದೇವರಾಜು, ಸಿಂಡಿಕೇಟ್ ಸದಸ್ಯರು, ವಿವಿಧ ನಿಖಾಯದ ಡೀನರು, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರು, ಬೋಧಕರು, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
vv

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments