ಹುಬ್ಬಳ್ಳಿ ಮಂದಿಗೆ ಬ್ಯಾಸರ : ಧಾರವಾಡ ಜನರು ಖುಷ್

Webdunia
ಬುಧವಾರ, 29 ಏಪ್ರಿಲ್ 2020 (16:05 IST)
ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರೆಸಲಾಗಿದ್ದರೆ, ಧಾರವಾಡದಲ್ಲಿ ಕೊಂಚ ರಿಲೀಫ್ ನೀಡಲಾಗಿದೆ.  

ಧಾರವಾಡ ಜಿಲ್ಲೆಯು ಕಿತ್ತಳೆ ವಲಯದಲ್ಲಿದೆ. ಹುಬ್ಬಳ್ಳಿ ಶಹರ ಹೊರತುಪಡಿಸಿ, ಧಾರವಾಡ ನಗರದಲ್ಲಿ ಕೆಲವು ಷರತ್ತುಗಳೊಂದಿಗೆ ಹಾಗೂ ಜಿಲ್ಲೆಯಾದ್ಯಂತ ಇತರ ತಾಲ್ಲೂಕುಗಳು ಮತ್ತು  ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಸೂಕ್ತ ಆರೋಗ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ ಶಹರದಲ್ಲಿ ಮಾತ್ರ ಕೋವಿಡ್ ಸಕ್ರಿಯ ಪ್ರಕರಣಗಳು ಇವೆ.  ಹುಬ್ಬಳ್ಳಿ ಶಹರದಲ್ಲಿ ಪ್ರಸ್ತುತ ಇರುವ ಎಲ್ಲಾ ನಿರ್ಬಂಧಗಳು ಯಥಾರೀತಿಯಲ್ಲಿ ಮುಂದುವರೆಯಲಿವೆ. ಧಾರವಾಡದಲ್ಲಿ ಪ್ರಾರಂಭದಲ್ಲಿ ಕಾಣಿಸಿಕೊಂಡಿದ್ದ ಒಂದು ಕೋವಿಡ್ ಪ್ರಕರಣ ಗುಣಮುಖವಾಗಿದೆ. ಈ ಕಾರಣಕ್ಕಾಗಿ ಧಾರವಾಡ ನಗರದಲ್ಲಿ ಮಾತ್ರ ಸೋಮವಾರ, ಮಂಗಳವಾರ , ಬುಧವಾರ ಹಾಗೂ ಗುರುವಾರ ದಿನಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ ( ಶಾಪ್ಸ್ ಮತ್ತು ಎಸ್ಟಾಬ್ಲಿಷ್‍ಮೆಂಟ್ ಆ್ಯಕ್ಟ್) ಪ್ರಕಾರ ನೋಂದಣಿಯಾಗಿರುವ ಕೃಷಿ ಮತ್ತು ಕೈಗಾರಿಕೆ ಪೂರಕವಾಗಿರುವ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments