Select Your Language

Notifications

webdunia
webdunia
webdunia
webdunia

ಫಲಿತಾಂಶ – ಕರ್ನಾಟಕದ ಜನರಿಗಾಗಿ ದೇವಾಲಯದಲ್ಲಿ ಪ್ರಾರ್ಥನೆ ಮಾಡಿದ ಪ್ರಿಯಾಂಕಾ ಗಾಂಧಿ

ಫಲಿತಾಂಶ – ಕರ್ನಾಟಕದ ಜನರಿಗಾಗಿ ದೇವಾಲಯದಲ್ಲಿ ಪ್ರಾರ್ಥನೆ ಮಾಡಿದ ಪ್ರಿಯಾಂಕಾ ಗಾಂಧಿ
ಶಿಮ್ಲಾ , ಶನಿವಾರ, 13 ಮೇ 2023 (11:08 IST)
ಶಿಮ್ಲಾ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ದೇವಾಲಯದಲ್ಲಿ ಪ್ರಾರ್ಥನೆ ನಡೆಸಿದ್ದಾರೆ.

ಹಿಮಾಚಲ ರಾಜಧಾನಿ ಶಿಮ್ಲಾದ ಜಖುವಿನಲ್ಲಿ ಹನುಮಾನ್ ದೇವಾಲಯಕ್ಕೆ ತೆರಳಿದ ಪ್ರಿಯಾಂಕಾ ಗಾಂಧಿ, ದೇಶದ ಹಾಗೂ ಕರ್ನಾಟಕದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.

ಇದೀಗ ಕರ್ನಾಟಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಆರಂಭದಿಂದಲೂ ಮುನ್ನಡೆ ಸಾಧಿಸುತ್ತಿದೆ. ಅಧಿಕಾರದಲ್ಲಿರುವ ಬಿಜೆಪಿ ಮತ್ತು ಜೆಡಿಎಸ್ ಭಾರೀ ಹಿನ್ನಡೆ ಮೂಲಕ ನಷ್ಟ ಅನುಭವಿಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

59 ಕ್ಷೇತ್ರಗಳಲ್ಲಿ ಮುನ್ನಡೆ ಅಂತರ ಕೇವಲ 1 ಸಾವಿರ!