Webdunia - Bharat's app for daily news and videos

Install App

ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವಿ. ವೀರಪ್ಪ: ರಾಜ್ಯಪಾಲದಿಂದ ಆದೇಶ

Sampriya
ಗುರುವಾರ, 4 ಜುಲೈ 2024 (20:08 IST)
Photo Courtesy X
ಬೆಂಗಳೂರು: ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪ, 2023ರ ಮೇ ತಿಂಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಎರಡನೇ ಉಪ ಲೋಕಾಯುಕ್ತರ ಹುದ್ದೆಗೆ ವೀರಪ್ಪ ಅವರನ್ನು ನೇಮಿಸಿದ್ದು, ಅವರ ಅಧಿಕಾರದ ಅವಧಿಯು ಐದು ವರ್ಷ ಇರಲಿದೆ

ಎರಡನೇ ಉಪ ಲೋಕಾಯುಕ್ತರ ಹುದ್ದೆ ನೇಮಕದ ಕುರಿತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೀರಪ್ಪ ಅವರನ್ನು ನೇಮಿಸುವಂತೆ ಜೂನ್‌ 24ರಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments