ಮೋದಿ ಮಧ್ಯಸ್ಥಿಕೆ ವಹಿಸಿದರೆ ಮಾತ್ರ ಬಿಜೆಪಿಗೆ ವಾಪಸ್

Webdunia
ಬುಧವಾರ, 22 ಫೆಬ್ರವರಿ 2023 (11:08 IST)
ಬೆಂಗಳೂರು : ಕೆಜೆಪಿ ಮತ್ತು ಬಿಜೆಪಿ ಒಂದಾಗುವ ಕಾಲ ಸನ್ನಿಹಿತವಾಗಿದೆ. ಸಂದರ್ಶನದಲ್ಲಿ ಧನಂಜಯ ಕುಮಾರ್ ಈ ವಿಷಯವನ್ನು ಖಚಿತಪಡಿಸಿದ್ದಾರೆ.
 
ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿದರೆ ಮಾತ್ರ ಕೆಜೆಪಿ ನಾಯಕ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾಗುವುದಕ್ಕೆ ಸಿದ್ಧ ಎಂದು ಕೆಜೆಪಿ ವಕ್ತಾರ ವಿ ಧನಂಜಯ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಮೂಲ ತತ್ವಗಳಿಗೆ ನಾವೆಂದೂ ವಿರೋಧ ಹೊಂದಿದವರಲ್ಲ. ಈಗ ಕೆಜೆಪಿ ಸಿದ್ಧಾಂತಕ್ಕೆ ಧಕ್ಕೆ ಬಾರದಂತೆ ಪೂರಕ ವಾತಾವರಣ ನಿರ್ಮಾಣವಾದರೆ ಬಿಜೆಪಿ ಜತೆ ಮರುಸೇರ್ಪಡೆಗೆ ನಾವು ಸಿದ್ಧ ಎಂದು ಅವರು ಟಿವಿ9ಗೆ ತಿಳಿಸಿದ್ದಾರೆ.

ಕೆಜೆಪಿಯ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಂಡೇ ಬಿಜೆಪಿ ಜತೆ ಕೈಜೋಡಿಸುತ್ತೇವೆ. ಬಿಜೆಪಿ ಜತೆ ಸಂಪೂರ್ಣ ವಿಲೀನ ಆಗಲು ಬಯಸುವುದಿಲ್ಲ. ಪ್ರತ್ಯೇಕವಾಗಿದ್ದುಕೊಂಡೇ ನಮ್ಮ ಅಸ್ತಿತ್ವ ಉಳಿಸಿಕೊಳ್ಳುತ್ತೇವೆ ಎಂದು ಧನಂಜಯ ಕುಮಾರ್ ಹೇಳಿದ್ದಾರೆ.

'ಮೋದಿ ಅವರು ಮಧ್ಯಸ್ಥಿಕೆಗೆ ಮುಂದೆ ಬಂದರೆ ಕೆಜೆಪಿ ಹೊಂದಾಣಿಕೆಗೆ ಸಿದ್ಧ. ಆದರೆ ಇದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆಗೆ ಮಾತ್ರ ಸೀಮಿತ. ಇದು ಯಡಿಯೂರಪ್ಪನವರ ನಿಲುವೂ ಆಗಿದೆ' ಎಂದು ಧನಂಜಯ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments